ಜಾತಿ ವೈಷಮ್ಯದ ಗಲಭೆ , ಚನ್ನಪಟ್ಟಣದಲ್ಲಿ ಲಾಠಿ ಚಾರ್ಜ್, ಅಶ್ರುವಾಯು
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಚನ್ನಪಟ್ಟಣದಲ್ಲಿ ಕಲ್ಲು ತೂರಾಟದಲ್ಲಿ ತೊಡಗಿದ್ದ ಸುಮಾರು 15 ಸಾವಿರದಷ್ಟಿದ್ದ ಗುಂಪೊಂದನ್ನು ನಿಯಂತ್ರಿಸಲು ಸೋಮವಾರ ಪೊಲೀಸರು ಅಶ್ರುವಾಯು ಶೆಲ್ಗಳನ್ನು ಸಿಡಿಸಿ, ಲಾಠಿ ಪ್ರಹಾರ ಮಾಡಿದಾಗ ನಗರದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.
ಮತ್ತೊಂದು ಜಾತಿಗೆ ಸೇರಿದ ವ್ಯಕ್ತಿಗಳು ಬಳಸಿದ್ದ ಅವಾಚ್ಯ ಶಬ್ದಗಳನ್ನು ಖಂಡಿಸಿ, ಒಕ್ಕಲಿಗರ ಹಿತರಕ್ಷಣಾ ವೇದಿಕೆ ಏರ್ಪಡಿಸಿದ್ದ ಪ್ರತಿಭಟನೆ ಪ್ರದರ್ಶನ ಹಿಂಸಾರೂಪ ತಳೆದಾಗ ಪೊಲೀಸರು ಲಾಠಿ ಪ್ರಹಾರ ಮಾಡಿದರು. ಪ್ರತಿಭಟನಾಕಾರರು ಸಹಾಯಕ ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಮನವಿ ಪತ್ರ ಸಲ್ಲಿಸಿ ಹಿಂತಿರುಗುತ್ತಿದ್ದಾಗ ಪ್ರತಿಭಟನೆ ಹಿಂಸಾರೂಪ ತಳೆಯಿತು.
ಭಾರಿ ಸಂಖ್ಯೆಯಲ್ಲಿದ್ದ ಪೊಲೀಸರು ಹಿಂಸೆಯನ್ನು ಹತ್ತಿಕ್ಕಲು ಲಾಠಿ ಪ್ರಹಾರ ನಡೆಸಿದರು. ಲಾಠಿ ಪ್ರಹಾರಕ್ಕೂ ಗುಂಪು ಜಗ್ಗದಿದ್ದಾಗ ಅಶ್ರುವಾಯು ಶೆಲ್ಗಳನ್ನು ಸಿಡಿಸುವುದು ಅನಿವಾರ್ಯವಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಾಮಕೃಷ್ಣ, ಚೆನ್ನಪಟ್ಟಣದಲ್ಲಿ ಮೊಕ್ಕಾಂ ಹೂಡಿದ್ದು, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ. ಈ ಘಟನೆಯ ಸಂಬಂಧ ಯಾರನ್ನೂ ಬಂಧಿಸಲಾಗಿಲ್ಲ ಎಂದೂ ಅವರು ಹೇಳಿದ್ದಾರೆ.
ಘಟನೆಯ ಹಿನ್ನೆಲೆ : ಹುಡುಗನೊಬ್ಬ ಚುಡಾಯಿಸಿದನೆಂದು ಬೇಸತ್ತು ಕಳೆದ ತಿಂಗಳು ಮಂಡ್ಯದಲ್ಲಿ ಹುಡುಗಿಯಾಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪತ್ರಿಕೆಯಾಂದರಲ್ಲಿ ಪ್ರಕಟವಾಗಿದ್ದ ವರದಿಯನ್ನು ಖಂಡಿಸಿ ಡಿಸೆಂಬರ್ 11ರಂದು ಕೆಲವು ದಲಿತ ಮುಖಂಡರು ನಡೆಸಿದ ಪ್ರದರ್ಶನದ ಸಂದರ್ಭದಲ್ಲಿ ಅವಾಚ್ಯ ಪದಗಳನ್ನು ಬಳಸಿದರು ಎಂದು ಆರೋಪಿಸಲಾಗಿದ್ದು, ಕೆಲವು ಅಶ್ಲೀಲ ಹೇಳಿಕೆಗಳು ಪಟ್ಟಣದ ಗೋಡೆಗಳ ಮೇಲೂ ರಾರಾಜಿಸಿದ್ದವು. ಇದನ್ನು ಖಂಡಿಸಿ, ಸೋಮವಾರ ಹಿತರಕ್ಷಣಾ ವೇದಿಕೆ ಪ್ರತಿಭಟನೆ ಹಮ್ಮಿಕೊಂಡಿತ್ತು. (ಯು.ಎನ್.ಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications