ಸಾವಿರ ಸುದ್ದಿಯ ಬೀರುತ ಬರುವನು,ತುಂಬಿದ ಚೀಲವು ಹೆಗಲೊಳಗೆ...
ಬೆಂಗಳೂರು : ಎರಡು ಕಾರ್ಮಿಕ ಸಂಘಟನೆಗಳು ಮುಷ್ಕರದಿಂದ ಹಿಂದೆ ಸರಿದ ಪರಿಣಾಮವಾಗಿ 14ನೇ ದಿನವಾದ ಸೋಮವಾರ ರಾಜ್ಯದ ಅಂಚೆ ಕಚೇರಿಗಳಲ್ಲಿ ಹಾಜರಾತಿ ಕಂಡುಬಂತು. ಭಾನುವಾರ ದೆಹಲಿಯಲ್ಲಿ ನಡೆದ ಮಾತುಕತೆಗಳ ಪರಿಣಾಮವಾಗಿ ರಾಜ್ಯದಲ್ಲೂ ಅಂಚೆ ನೌಕರರು ತಮ್ಮ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾದರು.
ರಾಜ್ಯದಲ್ಲಿ ಸುಮಾರು ಅರ್ಧದಷ್ಟು ಅಂಚೆ ಉದ್ಯೋಗಿಗಳು ಸೋಮವಾರ ಕೆಲಸಕ್ಕೆ ಹಾಜರಾಗಿದ್ದು, ಮಂಗಳವಾರದ ಹೊತ್ತಿಗೆ ಪರಿಸ್ಥಿತಿ ಮತ್ತಷ್ಟು ಸುಧಾರಿಸಲಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಅವರ ಕಚೇರಿ ಮೂಲಗಳು ತಿಳಿಸಿವೆ. ಆದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಅಂಚೆ ಮುಷ್ಕರ ಸೋಮವಾರ ಸಂಪೂರ್ಣ ಯಶಸ್ವಿಯಾಗಿತ್ತು. ಡಿಸೆಂಬರ್5ನೇ ತಾರೀಖಿನಿಂದಲೂ ಅಂಚೆ ನೌಕರರು ಅನಿರ್ದಿಷ್ಟ ಕಾಲಾವಧಿ ಮುಷ್ಕರದಲ್ಲಿ ತೊಡಗಿದ್ದರಿಂದ ರಾಜ್ಯದಲ್ಲಿ ಅಂಚೆ ಸೇವೆ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.
ರಾಜ್ಯದ ಬಹುತೇಕ ಅಂಚೆ ಕಚೇರಿಗಳಲ್ಲಿ ಸೋಮವಾರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಿದ್ದು, ಇನ್ನು ಒಂದೆರಡು ದಿನದಲ್ಲೇ ಅಂಚೆ ಸೇವೆ ಸಾಮಾನ್ಯ ಸ್ಥಿತಿಗೆ ಮರಳುತ್ತದೆ ಎಂಬ ಆಶಾಭಾವನೆಯನ್ನೂ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಮೂರು ಕಾರ್ಮಿಕ ಸಂಘಟನೆಗಳ ಪೈಕಿ ಎನ್.ಎಫ್.ಪಿ.ಯು.ಇ. ಮಾತ್ರ ಸೋಮವಾರ ಮಧ್ಯಾಹ್ನದವರೆಗೂ ತನ್ನ ಪಟ್ಟು ಸಡಿಲಿಸಿರಲಿಲ್ಲ. ಸಂಜೆಯ ವೇಳೆಗೆ ದೊರಕಿರುವ ವರ್ತಮಾನದ ಪ್ರಕಾರ ಎನ್ಎಫ್ಪಿಯುಇ ಸಹ ಕೆಲಸಕ್ಕೆ ಹಾಜರಾಗಲು ಸಮ್ಮತಿಸಿದೆ.
ಮೈಸೂರು ವರದಿ: ಕಳೆ--ದ 13 ದಿನ-ಗ-ಳಿಂ-ದ ಸ್ಥಗಿ-ತ-ಗೊಂ-ಡಿ-ದ್ದ ಅಂಚೆ ಸೇವೆ ಮೈಸೂರು -ನ-ಗ-ರ ಸೇರಿ-ದಂ-ತೆ ಸುತ್ತ-ಮು-ತ್ತ-ಲ ಪ್ರದೇ-ಶ-ಗ-ಳ-ಲ್ಲಿ ಪುನಾ-ರಂ-ಭ-ಗೊಂ-ಡಿದ್ದು, ಸಹಜ ಸ್ಥಿತಿಯತ್ತ ಮರಳುತ್ತಿದೆ. ಬಹು-ತೇ-ಕ ಉದ್ಯೋ-ಗಿ-ಗ-ಳು ಸೋಮವಾರ ಕೆಲ-ಸ-ಕ್ಕೆ ಹಾಜ-ರಾ-ಗಿ-ದ್ದು, ನೌಕ-ರ ಸಂಘ-ಟ-ನೆ-ಗ-ಳ ಸಂದೇ-ಶ ಬಂದ ನಂತ-ರ ಸುಮಾ-ರು ಎರ-ಡು ಗಂಟೆ ತಡ-ವಾ-ಗಿ ಕೆಲ-ಸ ಪುನಾ-ರಂ-ಭ-ಗೊ-ಂ-ಡಿ-ತೆಂ-ದು ಅಧಿ-ಕಾ-ರಿ-ಗ-ಳು ತಿಳಿ-ಸಿ-ದ್ದಾ-ರೆ.
ಹುಬ್ಬಳ್ಳಿ ವರದಿ : ಹುಬ್ಬಳ್ಳಿ - ಧಾರವಾಡ ಅವಳಿ ನಗರಗಳಲ್ಲಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲೂ ಸೋಮವಾರ ಅಂಚೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದು, ಪರಿಸ್ಥಿತಿ ಸುಧಾರಣೆಯಾಗಿದೆ ಎಂದು ಧಾರವಾಡದ ಅಂಚೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ( ಯು.ಎನ್.ಐ, ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications