ತನ್ನಂತೆ ಇತರರ ಬಗೆವ ಬದುಕು ಎಲ್ಲರದಾಗಲಿ - ಡಾ.ರಾಜ್ಕುಮಾರ್
ಬೆಂಗಳೂರು : ಜೀವನದಲ್ಲಿ ಸಾಕಷ್ಟು ಹಣ ಗಳಿಸುವ ಸ್ವಾರ್ಥವಷ್ಟೇ ಮುಖ್ಯವಾಗಬಾರದು. ನಮ್ಮ ಜೊತೆಗೆ ಇತರರನ್ನೂ ಬೆಳಿಸುವ ಉದಾರ ಗುಣವನ್ನು ಮನುಷ್ಯ ಬೆಳೆಸಿಕೊಳ್ಳಬೇಕು ಎಂದು ವರನಟ ಡಾ. ರಾಜ್ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಏರ್ಪಡಿಸಿದ್ದ ಧನ್ಯಮಿಲನ ಕಾರ್ಯಕ್ರಮದ ನಂತರ ಭಾನುವಾರ ಬಹಿರಂಗ ಸಮಾರಂಭವೊಂದರಲ್ಲಿ ರಾಜ್ ಕಾಣಿಸಿಕೊಂಡರು. ಜಯನಗರ ಬಡಾವಣೆಯಲ್ಲಿ ಬೆಲ್ಲಿನಿ ಸಂಸ್ಥೆಯ ವ್ಯಾಪಾರಿ ಮಳಿಗೆಯಾಂದನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮನುಷ್ಯ ತನ್ನಂತೆ ಇತರರನ್ನು ಬಗೆಯಬೇಕು. ಉಳ್ಳವರು ಇಲ್ಲದವರಿಗೆ ಸಹಾಯ ನೀಡಬೇಕು ಎಂದು ಹೇಳಿದ ರಾಜ್, ಬೆಲ್ಲಿನಿ ಸಂಸ್ಥೆಯು ಪಾರ್ವತಮ್ಮ ರಾಜ್ಕುಮಾರ್ ಅವರು ಅನಾಥರಿಗಾಗಿ ನಡೆಸುತ್ತಿರುವ ಶಕ್ತಿಧಾಮಕ್ಕೆ ನೀಡಿರುವ ಆರ್ಥಿಕ ಸಹಾಯವನ್ನು ಶ್ಲಾಘಿಸಿದರು. ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಭಾನುವಾರದಂದೇ ರಾಜ್ ಅವರು ಮಲ್ಲೇಶ್ವರಂ ಬಡಾವಣೆಯಲ್ಲೂ ಬೆಲ್ಲಿನಿ ಸಂಸ್ಥೆಯ ಮತ್ತೊಂದು ಶಾಖೆಯ ಕಾರ್ಯಾರಂಭಕ್ಕೆ ಚಾಲನೆ ನೀಡಿದರು. ರಾಜ್ ಅವರನ್ನು ನೋಡಲು ಅಂಗಡಿಯ ಮುಂದೆ ನೆರೆದಿದ್ದ ಸಾವಿರಾರು ಅಭಿಮಾನಿಗಳು ಜಯಕಾರದ ಘೋಷಣೆ ಕೂಗಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications