Get Updates
Get notified of breaking news, exclusive insights, and must-see stories!

ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡಲು ಆಗ್ರಹ

ರಾಯಚೂರು : ಶರಣ ಕ್ರಾಂತಿಯ ಪ್ರದೇಶದಲ್ಲಿರುವ ಗುಲ್ಬರ್ಗಾ ವಿಶ್ವ ವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡಬೇಕು, ಉತ್ತರ ಕರ್ನಾಟಕದ ಜನರ ಬಹುದಿನದ ಬೇಡಿಕೆಯಾದ ನೈಋತ್ಯ ರೇಲ್ವೆ ವಲಯ ಸ್ಥಾಪನೆ ಆಗಬೇಕು, ಹೈಕೋರ್ಟ್‌ ಪೀಠ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ನಿರ್ಣಯಗಳನ್ನು ಇಲ್ಲಿ ನಡೆದ 6ನೇ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರ ಕೈಗೊಳ್ಳಲಾಗಿದೆ.

ಶರಣ ಸಾಹಿತ್ಯ ಸಂಸ್ಕೃತಿಯ ಸಂರಕ್ಷಣೆ, ಕೃಷ್ಣ ಮೇಲ್ದಂಡೆ ಯೋಜನೆಗೆ ತ್ವರಿತ ಕ್ರಮ ಕೈಗೊಳ್ಳಬೇಕು, ಕಿತ್ತೂರಿ ರಾಣಿ ಚೆನ್ನಮ್ಮ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸ್ಥಾಪಿಸಬೇಕು, ಬೆಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಎಸ್‌. ನಿಜಲಿಂಗಪ್ಪನವರ ಪ್ರತಿಮೆ ಸ್ಥಾಪಿಸಬೇಕು ಎಂದೂ ಶರಣಾಧಿವೇಶನದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಗೊ.ರು. ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಮ್ಮೇಳನದಲ್ಲಿ ಡಾ. ಎಚ್‌. ಎಂ. ಮರಳುಸಿದ್ದಯ್ಯ ಈ ನಿರ್ಣಯಗಳನ್ನು ಮಂಡಿಸಿದರು. ಸಭೆ ಕರತಾಡನದ ಮೂಲಕ ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಿತು.

ಜಾಗತೀಕರಣ ಹಾಗೂ ಖಾಸಗೀಕರಣ ನೀತಿಯಿಂದಾಗಿ ನಷ್ಟಕ್ಕೆ ತುತ್ತಾಗಿರುವ ಗ್ರಾಮೀಣ ರೈತ ಸಮುದಾಯದ ಬಗ್ಗೆಯೂ ಸಮ್ಮೇಳನದಲ್ಲಿ ಕಳಕಳಿ ವ್ಯಕ್ತವಾಯಿತು. ಹಾಲಿ ಇರುವ ಶಾಲೆ, ಕಾಲೇಜು ಪ್ರವೇಶ, ಉದ್ಯೋಗದಲ್ಲಿ ಕೇವಲ ಜಾತಿಯನ್ನು ಪರಿಗಣಿಸದೆ, ರಾಜ್ಯಾಂಗದ ಚೌಕಟ್ಟಿನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗಳ್ನು ಪರಿಗಣಿಸಿ ಸಾಮಾಜಿಕ ಸಮಾನತೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.

ಸಮಾರಂಭದಲ್ಲಿ ಡಾ. ಭಗವಾನ್‌ ದಾಸ್‌ ತಿವಾರಿ, ಡಾ. ಎಚ್‌. ಚಂದ್ರಶೇಖರ್‌, ಎಂ. ನಾಗಪ್ಪ ಗೊ.ರು. ಚನ್ನಬಸಪ್ಪ ಮೊದಲಾದವರು ಹಾಜರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+