ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಖಾಸಗೀಕರಣ ವಿರೋಧಿಸಿ 21ರಂದು ಬ್ಯಾಂಕ್ ನೌಕರರ ಮುಷ್ಕರ
ಬೆಂಗಳೂರು : ಬ್ಯಾಂಕ್ ಖಾಸಗೀಕರಣ ವಿರೋಧಿಸಿ, 10 ಲಕ್ಷಕ್ಕೂ ಹೆಚ್ಚು ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ದೇಶಾದ್ಯಂತ ಡಿಸೆಂಬರ್ 21ರ ಗುರುವಾರ ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸುತ್ತಿದ್ದಾರೆ. ಈ ವಿಷಯವನ್ನು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ ಅಧ್ಯಕ್ಷ ಶಾಂತರಾಜು ಮಂಗಳವಾರ ತಿಳಿಸಿದ್ದಾರೆ.
ಸರ್ವತ್ರ ವಿರೋಧ, ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೂ ಕೇಂದ್ರ ಸರಕಾರ ಖಾಸಗೀಕರಣಕ್ಕೆ ಒಲುವು ತೋರಿರುವುದನ್ನು ವಿರೋಧಿಸಿ ಈ ಮುಷ್ಕರ ನಡೆಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ. ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಮತ್ತೊಂದು ಮುಷ್ಕರ ನಡೆಸಲು ಅವಕಾಶ ನೀಡದಂತೆ ಸರಕಾರ ತನ್ನ ನಿಲವನ್ನು ಪುನರ್ಪರಿಶೀಲಿಸಬೇಕು ಎಂದು ಅವರು ಹೇಳಿದ್ದಾರೆ.
ಬ್ಯಾಂಕ್ ಉದ್ಯೋಗಿಗಳ ಹಾಗೂ ಅಧಿಕಾರಿಗಳ ಹಿತಾಸಕ್ತಿಯನ್ನು ಕಡೆಗಣಿಸಿ, ಸರಕಾರ ತನ್ನ ನಿಲುವಿಗೇ ಅಂಟಿಕೊಂಡರೆ, ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯವಾಗುತ್ತದೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ. (ಯು.ಎನ್.ಐ)
Comments
Story first published: Sunday, December 24, 2000, 5:30 [IST]