ಕನ್ನಡಿಗನಿಗೊಂದು ಗಿಡ : ನೆಡುತ್ತಿದೆ ಆದಿ ಚುಂಚನಗಿರಿ ಸಂಸ್ಥಾನ
ಶಿವಮೊಗ್ಗ : ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠವು ನಾಲ್ಕು ನೂರು ಕೋಟಿ ರೂಪಾಯಿ ವೆಚ್ಚದ ಕರ್ನಾಟಕ ವನ ಸಂವರ್ಧನ ಯೋಜನೆಯನ್ನು ರೂಪಿಸಿದ್ದು , ರಾಜ್ಯದಲ್ಲಿ ಐದು ಕೋಟಿ ಗಿಡ ನೆಡುವ ಗುರಿ ಇಟ್ಟುಕೊಂಡಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಾಲ ಗಂಗಾಧರನಾಥ ಸ್ವಾಮಿಗಳು, ಈ ಯೋಜನೆಯು ಜನವರಿ 11ರಂದು ಅಸ್ತಿತ್ವಕ್ಕೆ ಬರಲಿದೆ ಎಂದರು. ಇದಕ್ಕಾಗಿ 40 ಮಂದಿ ಸದಸ್ಯರಿರುವ ಕರ್ನಾಟಕ ವನ ಸಂವರ್ಧನ ಟ್ರಸ್ಟ್ನ್ನು ರಚಿಸಲಾಗಿದ್ದು, ಈ ಕುರಿತ ಯೋಜನಾ ವರದಿಯನ್ನು ಸದ್ಯದಲ್ಲಿಯೇ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದರು. ಬಾಲಗಂಗಾಧರನಾಥ ಸ್ವಾಮಿಗಳು ಟ್ರಸ್ಟ್ನ ಅಧ್ಯಕ್ಷರಾಗಿದ್ದು ಅರಣ್ಯ ಮತ್ತು ಪರಿಸರ ಇಲಾಖೆಯ ಮಾಜಿ ಕಾರ್ಯದರ್ಶಿ ಯಲ್ಲಪ್ಪ ರೆಡ್ಡಿ ಟ್ರಸ್ಟ್ನ ಕಾರ್ಯದರ್ಶಿಯಾಗಿರುತ್ತಾರೆ.
ಯೋಜನೆಯಡಿಯಲ್ಲಿ ಗಿಡ ನೆಡಲು ಹಲವು ಯಂತ್ರಗಳನ್ನು, ಟ್ರಾಕ್ಟರ್ ಟ್ಯಾಂಕರ್ಗಳನ್ನು ಖರೀದಿಸಿ ಆರು ತಿಂಗಳ ಅವಧಿಯಲ್ಲಿ ಗಿಡಗಳನ್ನು ನೆಡಲಾಗುವುದು. ಪ್ರತಿ ಹತ್ತು ಕಿಲೋ ಮೀಟರ್ ವ್ಯಾಪ್ತಿಗೆ ಒಬ್ಬನನ್ನು ಗಿಡಗಳ ರಕ್ಷಣೆಗಾಗಿ ನೇಮಿಸಲಾಗುವುದು. ಪ್ರತಿ 30 ಕಿ.ಮೀ.ಗೆ ಒಂದು ಟ್ಯಾಂಕರ್ನಲ್ಲಿ ನೀರು ಸರಬರಾಜು ಮಾಡಲಾಗುತ್ತದೆ ಎಂದು ಯೋಜನೆಯ ಬಗ್ಗೆ ಮಾಹಿತಿ ನೀಡಿದ ಸ್ವಾಮೀಜಿಗಳು ಟ್ರಸ್ಟ್ ಪರಿಸರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ವಿದೇಶೀ ಸಂಸ್ಥೆಗಳು ಮತ್ತು ಸ್ಥಳೀಯ ಸಂಘಗಳ ನೆರವು
ಈ ಯೋಜನೆಗಾಗಿ ವಿದೇಶೀ ಸಂಸ್ಥೆಗಳ ನೆರವು ಕೋರಲಾಗುವುದು. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಕಾರದೊಂದಿಗೆ ಯೋಜನೆ ಆರಂಭವಾಗುತ್ತದೆ. ಐದು ವರ್ಷಗಳ ಅವಧಿಯಲ್ಲಿ , ಐದು ಕೋಟಿ ಹಣ್ಣು ಹಂಪಲು ಮತ್ತು ಔಷಧೀಯ ಗಿಡಗಳನ್ನು ನೆಟ್ಟು, ಬೆಳೆಸಿ, ಪೋಷಿಸಲಾಗುವುದು. ನಂತರ ಆಯಾ ಪ್ರದೇಶದಲ್ಲಿ ಸಂಬಂಧ ಪಟ್ಟವರಿಗೆ ಈ ಗಿಡಗಳ ಜವಾಬ್ದಾರಿಯನ್ನು ವಹಿಸಲಾಗುವುದು ಎಂದು ಸ್ವಾಮೀಜಿ ವಿವರಿಸಿದರು.
ಬಾಲಂಗೋಚಿ : ಉನ್ನತ ಶಿಕ್ಷಣ ಪ್ರಸಾರಕ್ಕಿಂತಲೂ ಗಿಡ ನೆಡುವುದು ಮುಖ್ಯ ಅನ್ನುವುದು ನಮ್ಮ ಇತರ ಜಗದ್ಗುರುಗಳಿಗೆ ಅರ್ಥವಾಗುವುದು ಯಾವಾಗ ?
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications