ಮುಷ್ಕರ ಯಶಸ್ವಿ : ದೇಶಾದ್ಯಂತ ಬ್ಯಾಂಕಿಂಗ್ಸೇವೆ ಸಂಪೂರ್ಣ ಬಂದ್
ನವದೆಹಲಿ : ಬ್ಯಾಂಕ್ ನೌಕರರ ಮುಷ್ಕರದಿಂದಾಗಿ ಗುರುವಾರ ರಾಷ್ಟ್ರಾದ್ಯಂತ ಬ್ಯಾಂಕಿಂಗ್ ಸೇವೆ ಸ್ಥಗಿತಗೊಂಡಿದೆ. ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿನ ಸರ್ಕಾರದ ಈಕ್ವಿಟಿಯನ್ನು ಶೇ.33 ಕ್ಕೆ ತಗ್ಗಿಸುವ ಮಸೂದೆಯನ್ನು ಸಂಸತ್ತಿನ ಮುಂದೆ ಮಂಡಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಒಂದು ದಿನದ ಮುಷ್ಕರವನ್ನು ಬ್ಯಾಂಕ್ ನೌಕರರು ನಡೆಸುತ್ತಿದ್ದಾರೆ.
ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎದುರು ಮುಷ್ಕರ ನಿರತ ನೌಕರರು ಧರಣಿ ನಡೆಸಿದರು. ಮುಷ್ಕರ ಸಂಪೂರ್ಣ ಯಶಸ್ವಿ, ದೇಶಾದ್ಯಂತ ಎಲ್ಲಾ ಬ್ಯಾಂಕಿಂಗ್ ಸೇವೆಗಳು ಸ್ಥಗಿತವಾಗಿವೆ ಎಂದು ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಯ (ಯುಎಫ್ಬಿಯು) ದೆಹಲಿ ಸಂಘಟಕ ವಿ.ಕೆ. ಗುಪ್ತ ಪ್ರಕಟಿಸಿದ್ದಾರೆ. ಯುಎಫ್ಬಿಯು, 10 ಲಕ್ಷ ನೌಕರರನ್ನು ಪ್ರತಿನಿಧಿಸುವ ಒಂಭತ್ತು ಸಂಘಟನೆಗಳನ್ನು ಒಂದೇ ವೇದಿಕೆಯಡಿ ತಂದಿದೆ.
ದೇಶದ ಉಳಿದ ಭಾಗಗಳಲ್ಲೂ ಬಂದ್ ಯಶಸ್ವಿಯಾಗಿರುವ ವರದಿಗಳು ಬಂದಿದ್ದು, ಖಾಸಗಿ ಬ್ಯಾಂಕ್ಗಳ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ನ ನೌಕರರು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಬಂದ್ ಯಶಸ್ವಿ : ಒಂದು ದಿನದ ಬ್ಯಾಂಕ್ ಮುಷ್ಕರಕ್ಕೆ ರಾಜ್ಯದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ರಾಜ್ಯಾದ್ಯಂತ ಬ್ಯಾಂಕಿಂಗ್ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿವೆ.
ಸುಮಾರು 2 ಸಾವಿರ ಬ್ಯಾಂಕ್ ನೌಕರರು ಜೆಸಿ ರಸ್ತೆಯ ಕೆನರಾ ಬ್ಯಾಂಕ್ನ ಪ್ರಧಾನ ಕಚೇರಿಯ ಎದುರು ಧರಣಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಆನಂತರ ಮುಷ್ಕರ ನಿರತ ನೌಕರರ ಮೆರವಣಿಗೆ ಕೆಂಪೇಗೌಡ ರಸ್ತೆಯ ಮೈಸೂರು ಬ್ಯಾಂಕ್ವರೆಗೆ ನಡೆಯಿತು. ಆದರೆ, ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(ಪಿಟಿಐ / ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications