ಯಲಹಂಕ ಬಳಿ ಜೈವಿಕ ತಂತ್ರಜ್ಞಾನ ಕೇಂದ್ರ ಸ್ಥಾಪನೆ: ಪರಮೇಶ್ವರ್
ಶಿವಮೊಗ್ಗ : ಬೆಂಗಳೂರಿನ ಮೇಖ್ರಿ ವೃತ್ತದಿಂದ ಯಲಹಂಕದವರೆಗಿನ ಪ್ರದೇಶವನ್ನು ರಾಜ್ಯ ಸರಕಾರವು ಜೈವಿಕ ತಂತ್ರಜ್ಞಾನ ವಲಯ ಎಂದು ಗುರುತಿಸಿದ್ದು, ಯಲಹಂಕ ಬಳಿ 50 ಎಕರೆ ಪ್ರದೇಶದಲ್ಲಿ ಜೈವಿಕ ತಂತ್ರಜ್ಞಾನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಗುರುವಾರ ಜವಾಹರಲಾಲ್ ಎಂಜಿನಿಯರಿಂಗ್ ಕಾಲೇಜಿನ ಸಿಂಗಲ್ ರೂಂ ಹಾಸ್ಟೆಲ್ ಕಟ್ಟಡ ಉದ್ಘಾಟಿಸಿದ ತರುವಾಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಸಚಿವರು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬಳಿಕ ಮಹತ್ವ ಪಡೆದಿರುವ ಹಾಗೂ ತ್ವರಿತ ಗತಿಯಲ್ಲಿ ಬೆಳೆಯುತ್ತಿರುವ ಕ್ಷೇತ್ರ ಜೈವಿಕ ತಂತ್ರಜ್ಞಾನ ಎಂದು ಹೇಳಿದರು.
ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯ ಅಗ್ರಸ್ಥಾನದಲ್ಲಿರುವಂತೆ ನೋಡಿಕೊಳ್ಳಲು ಸರಕಾರ ಪ್ರಯತ್ನಿಸುವುದು ಎಂದ ಅವರು, ರಾಜ್ಯದ 50 ಪದವಿ ಕಾಲೇಜುಗಳಲ್ಲಿ ಜೈವಿಕ ತಂತ್ರಜ್ಞಾನ ಅಧ್ಯಯನಕ್ಕೆ ಅವಕಾಶ ನೀಡಲಾಗಿದೆ, ಪದವಿ ಹಂತದಲ್ಲಿ ಜೈವಿಕ ತಂತ್ರಜ್ಞಾನವನ್ನು ರಸಾಯನ ಹಾಗೂ ಸಸ್ಯಶಾಸ್ತ್ರ ಪ್ರಾಧ್ಯಾಪಕರೇ ಭೋದಿಸಬಹುದಾಗಿದೆ ಎಂದರು.
ಕೇಂದ್ರ ಸರಕಾರವು ಈಗಾಗಲೇ ಜೈವಿಕ ತಂತ್ರಜ್ಞಾನ ಅಧ್ಯಯನಕ್ಕಾಗಿ ಕುವೆಂಪು ವಿಶ್ವವಿದ್ಯಾಲಯಕ್ಕೆ 20 ಲಕ್ಷ ರೂಗಳನ್ನು ನೀಡಿದೆ. ಕಂಪ್ಯೂಟರ್ ಎಂಜಿನಿಯರಿಂಗ್ ಹೊರತಾದ ಎಂಜಿನಿಯರಿಂಗ್ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳೂ ಕಂಪ್ಯೂಟರ್ ಕಲಿಯಲಿ ಎಂಬ ಉದ್ದೇಶದಿಂದ 40 ಲಕ್ಷ ರುಪಾಯಿ ವೆಚ್ಚದಲ್ಲಿ ಕಲಿಕಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದ ಅವರು, ನೆಟ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಗ್ರಂಥಾಲಯ ಸೌಲಭ್ಯವನ್ನೂ ಒದಗಿಸಲಾಗುವುದು ಎಂದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications