ಶಾಂತಿನಾಥ ದೇಸಾಯರ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ
ನವದೆಹಲಿ : ಕನ್ನಡದ ಖ್ಯಾತ ಸಾಹಿತಿ ದಿವಂಗತ ಶಾಂತಿನಾಥ ದೇಸಾಯಿಯವರ ಓಂ ನಮೋ ಕಾದಂಬರಿಗೆ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಲಭಿಸಿದೆ.
ಶುಕ್ರವಾರ ಇಲ್ಲಿ ನಡೆದ ಕೇಂದ್ರ ಸಾಹಿತ್ಯ ಅಕಾಡಮಿ ಸಭೆಯಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರು ದೇಸಾಯರ ಈ ಕೃತಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದರೆಂದು ಅಕಾಡಮಿಯ ಕಾರ್ಯದರ್ಶಿ ಸಚ್ಚಿದಾನಂದನ್ ತಿಳಿಸಿದರು. 25 ಸಾವಿರ ರುಪಾಯಿ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಈ ಪ್ರಶಸ್ತಿ ಒಳಗೊಂಡಿದೆ.
ಬರುವ ಫೆಬ್ರವರಿ 20ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. 21 ಭಾರತೀಯ ಭಾಷೆಗಳ ಕೃತಿಗಳಿಗೆ ಪ್ರಶಸ್ತಿ ನೀಡಲಾಗಿದ್ದು, ಸಂಸ್ಕೃತ ಭಾಷೆಯ ಕೃತಿಗೆ ಮಾತ್ರ ಕೊನೆ ಗಳಿಗೆಯಲ್ಲಿ ಉಂಟಾದ ತಾಂತ್ರಿಕ ತೊಡಕಿನಿಂದಾಗಿ ಪ್ರಶಸ್ತಿ ಪ್ರಕಟಿಸಲಾಗಲಿಲ್ಲ ಎಂದು ಸಚ್ಚಿದಾನಂದನ್ ತಿಳಿಸಿದರು. ಪ್ರಶಸ್ತಿಯ ನಗದು ಮೊತ್ತವನ್ನು ಹೆಚ್ಚಿಸಬೇಕು ಎಂಬ ಬಹುದಿನಗಳ ಬೇಡಿಕೆ ಪರಿಶೀಲನೆಯಲ್ಲಿದೆ ಎಂದೂ ಅವರು ಹೇಳಿದರು.
ಆಧುನಿಕ ಕನ್ನಡ ಗದ್ಯ ಪ್ರಕಾರದಲ್ಲಿ ಗಂಭೀರ ಕೃಷಿ ನಡೆಸಿರುವ ದೇಸಾಯರು ನಮ್ಮ ಮಹತ್ವದ ಬರಹಗಾರರಲ್ಲಿ ಒಬ್ಬರು. ಬೀಜ, ಸೃಷ್ಟಿ, ವಿಕ್ಷೇಪ, ರಾಕ್ಷಸ ಮೊದಲಾದ ಕೃತಿಗಳನ್ನು ರಚಿಸಿರುವ ದೇಸಾಯರಿಗೆ 1977ರಲ್ಲಿ ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ ದೊರಕಿತ್ತು. ರಾಕ್ಷಸ ಕೃತಿ ಅವರಿಗೆ ಈ ಪ್ರಶಸ್ತಿ ತಂದು ಕೊಟ್ಟಿತ್ತು.
(ನಮ್ಮ ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications