ಲಿಂಗಾಂಬುಧಿಯ ಪಕ್ಷಿಗಳ ಪ್ರಾಣಪಕ್ಷಿಗೆ ಯಮಪಾಶವಾದ ಸೋಂಕು ರೋಗ
ಮೈಸೂರು : ಇಲ್ಲಿನ ಲಿಂಗಾಂಬುಧಿ ಕೆರೆಯಲ್ಲಿ ಪಕ್ಷಿಗಳ ಅಸಹಜ ಸಾವಿಗೆ ಸೋಂಕು ರೋಗ ಕಾರಣವಿರಬಹುದೆಂದು ಬೆಂಗಳೂರಿನ ಪಶು ಆರೋಗ್ಯ ಮತ್ತು ಪಶುಜೀವನ ಅಧ್ಯಯನ ಸಂಸ್ಥೆ ಪ್ರಯೋಗಾಲಯದ ಪ್ರಾಥಮಿಕ ತನಿಖೆಗಳು ತಿಳಿಸಿವೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್. ಜಯಕುಮಾರ್ ಭಾನುವಾರ ಹೊರಡಿಸಿರುವ ಸುದ್ದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯೋಗಾಲಯವು ಹೆಚ್ಚಿನ ಪರೀಕ್ಷೆಗಳಲ್ಲಿ ತೊಡಗಿದೆ. ಪಕ್ಷಿಗಳ ಸೋಂಕಿಗೆ ಕಾರಣವಾದ ಜೀವಾಣುವಿನ ಸಂತಾನಾಭಿವೃದ್ಧಿಯಾಗದಂತೆ ಎಚ್ಚರಿಕೆ ಕ್ರಮ ವಹಿಸಲು ಪ್ರಯೋಗಾಲಯ ಸೂಚಿಸಿದೆ. ಇದಕ್ಕಾಗಿ ಲಿಂಗಾಂಬುಧಿ ಕೆರೆ ಅಂಗಳದಲ್ಲಿ ಸೂಕ್ತ ಸಿಬ್ಬಂದಿಯನ್ನು ನೇಮಿಸಿದ್ದು ಲಭ್ಯವಿರುವ ಎಲ್ಲಾ ಮಾಹಿತಿ ಸಂಗ್ರಹಿಸಲು ಅನುಕೂಲವಾಗುವಂತೆ ಕೆರೆಯಲ್ಲಿ ಓಡಾಡಲು ದೋಣಿ ವ್ಯವಸ್ಥೆ ಮಾಡಲಾಗಿದೆ ಎಂದು ಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಿಂಗಾಂಬುಧಿ ಕೆರೆಯಲ್ಲಿ ಇದುವರೆಗೆ 40 ಕ್ಕೂ ಹೆಚ್ಚು ಪಕ್ಷಿಗಳು ನಿಗೂಢ ರೀತಿಯಲ್ಲಿ ಸತ್ತಿದ್ದು , ಪಕ್ಷಿಗಳ ಸಾವಿಗೆ ಪರಿಸರ ಪ್ರಿಯರು ಅಪಾರ ಆತಂಕ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನೆಯಬಹುದು. ಪಕ್ಷಿಗಳ ಸಾವಿಗೆ ಕ್ಲೋಸ್ಟ್ರಿಡಂ ಬೊಯಾಲಿಯಂ ಎನ್ನುವ ಬ್ಯಾಕ್ಟೀರಿಯಾ ಕಾರಣ ಇರಬಹುದೆಂದು ವಿಜ್ಞಾನಿಗಳು ಶಂಕಿಸಿದ್ದಾರೆ.
(ಇನ್ಪೊ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications