ಚಂಡಮಾರುತ ನಮ್ಮೂರಿಗೂ ಬಂದೀತೆ ?
ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿರುವ ಚಂಡಮಾರುತ ಶ್ರೀಲಂಕಾದಲ್ಲಿ ಸುಮಾರು 50 ಸಾವಿರ ಜನರನ್ನು ನಿರ್ವಸಿತರನ್ನಾಗಿ ಮಾಡಿರುವ ದುರಂತದ ಬೆನ್ನಿಗೇ, ತಮಿಳುನಾಡಿಗೂ ಅಡಿಯಿಟ್ಟಿದೆ. ತಮಿಳು ನೆಲದಲ್ಲೂ ಭಾರೀ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿಗಳು ತಿಳಿಸಿವೆ.
ಪಕ್ಕದ ನೆಲದಲ್ಲಿನ ಆತಂಕಕ್ಕೂ ತನಗೂ ಯಾವುದೇ ಸಂಬಂಧ ಇಲ್ಲ ಅನ್ನುವಂತಹ ವಾತಾವರಣ ರಾಜ್ಯದಲ್ಲಿದೆ. ಕೃಷಿಯನ್ನು ಹೈಟೆಕ್ ಮಟ್ಟಕ್ಕೆ ಏರಿಸುವ ಮೂಲಕ ವ್ಯವಸಾಯ ಮನೆ ಮಕ್ಕಳೆಲ್ಲಾ ಸಾಯ ಅನ್ನುವ ಮಾತನ್ನು ಸುಳ್ಳು ಮಾಡಲು ತಮ್ಮ ಸರ್ಕಾರ ಪಣ ತೊಟ್ಟಿರುವುದಾಗಿ ಹೈಟೆಕ್ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ. ರಾಜಕಾರಣಿಗಳ ಮಾತುಗಳಿಗೆ ಎಂದಿನಂತೆ ಸಂಭ್ರಮಿಸುವ ನಮ್ಮ ರೈತರು ಈ ಸುದ್ದಿಯಿಂದಲೂ ಖುಷಿಯಾಗಬಹುದು.
ತೀರಾ ಮನೆ ಅಂಗಳದ ಖಾಸಗಿ ವಿಚಾರವನ್ನೇ ಹೇಳುವುದಾದರೆ, ರಾಜ್ಯಾದ್ಯಂತ ಮಾಮೂಲಿನ ಒಣಹವೆ. ಒಳನಾಡು ಹಾಗೂ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಸ್ವಲ್ಪ ಮಟ್ಟಿಗೆ ಕುಸಿತ ಕಂಡಿದ್ದನ್ನು ಬಿಟ್ಟರೆ ಉಳಿದಂತೆ ರಾಜ್ಯದ ಹವಾಮಾನದಲ್ಲಿ ಹೇಳುವಂಥಾ ವ್ಯತ್ಯಯಗಳೇನೂ ಇಲ್ಲ . ಕನಿಷ್ಠ ತಾಪಮಾನ ಪಟ್ಟಿಯಲ್ಲಿ ತನ್ನ ಅಧಿಪತ್ಯ ಮುಂದುವರಿಸಿರುವ ಗುಲ್ಬರ್ಗಾ ಈ ದಿನ 9 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಿಸಿದೆ.
ಗುರುವಾರ ಕೂಡ ರಾಜ್ಯದ ಹವಾಮಾನ ಅದೇ ಹಾಡು ಅದೇ ರಾಗ ಎಂದು ಹವಾಮಾನ ಇಲಾಖೆಯ ಮೂಲಗಳನ್ನುದ್ದೇಶಿಸಿ ಯುಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಥಂಡಿಗಾಳಿ ಮಿಶ್ರಿತ ಚುರುಕುಗಾಳಿಯ ಹವೆ ಬೆಂಗಳೂರಿನಲ್ಲಿ ಮುಂದುವರಿಯುತ್ತದಂತೆ. ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಷಿಯಸ್ ಆಸುಪಾಸಿನಲ್ಲಿರುತ್ತದೆ. ಅಂದ ಮೇಲೆ, ತಮಿಳುನಾಡಿನಲ್ಲಿ ಕಾಣಿಸಿಕೊಂಡಿರುವ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆ ಇಲ್ಲ ಎಂದಾಯಿತು. ಆದರೆ, ಬುಧವಾರ ಮಾತ್ರ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು .
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications