ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಮತಾ ಪಕ್ಷ ರಾಜ್ಯಾಧ್ಯಕ್ಷರಾಗಿ ಕೆ.ಮಾದೇಗೌಡ
ಬೆಂಗಳೂರು : ಸಮತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಮೈಸೂರು ಜಿಲ್ಲೆಯ ಬನ್ನೂರು ಕ್ಷೇತ್ರದ ಮಾಜಿ ಶಾಸಕ ಕೆ. ಮಾದೇಗೌಡರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಜನವರಿ 8 ಹಾಗೂ 9 ರಂದು ಪಕ್ಷದ ಪೂರ್ಣಾಧಿವೇಶನ ಮೈಸೂರಿನಲ್ಲಿ ನಡೆಯಲಿದೆ. ಅಲ್ಲಿ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದರು. ಸಮತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಮಾದೇಗೌಡ ಅವರು, 1972 ಹಾಗೂ 1978 ರಲ್ಲಿ ಬನ್ನೂರು ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು ಹಾಗೂ ಎಂಟು ವರ್ಷಗಳ ಕಾಲ ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿದ್ದರು.
(ಇನ್ಪೊ ವಾರ್ತೆ)
Comments
Story first published: Wednesday, January 24, 2001, 5:30 [IST]