ವಿಮಾ ವ್ಯಾಪ್ತಿಗೆ ಶಾಲಾ ಮಕ್ಕಳು ಹಾಗೂ ಶಿಕ್ಷಕರು
ಮೈಸೂರು : ಶಾಲಾ ಮಕ್ಕಳು ಮತ್ತು ಶಿಕ್ಷಕರಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಾರ್ಷಿಕ 1.10 ಕೋಟಿ ರುಪಾಯಿಗಳ ಪ್ರೀಮಿಯಂನಲ್ಲಿ ವಿಮಾ ಯೋಜನೆಯನ್ನು ರಾಜ್ಯ ಸರ್ಕಾರ ಪರಿಚಯಿಸುತ್ತದೆ ಎಂದು ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಪ್ರಕಟಿಸಿದ್ದಾರೆ.
ಒಂದರಿಂದ ಹತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳು ಹಾಗೂ 2.75 ಲಕ್ಷ ಶಿಕ್ಷಕರು ವಿಮಾ ವ್ಯಾಪ್ತಿಗೆ ಒಳಪಡುತ್ತಾರೆ. ಪ್ರೀಮಿಯಂ ಹಣವನ್ನು ಸ್ವಯಂ ಸೇವಾ ಸಂಘಗಳ ಸಹಕಾರದಲ್ಲಿ ತುಂಬಲಾಗುವುದು ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವಿಶ್ವನಾಥ್ ಹೇಳಿದರು.
ಅಪಘಾತ, ಅಂಗವೈಕಲ್ಯ ಹಾಗೂ ವೈದ್ಯಕೀಯ ಚಿಕಿತ್ಸೆಯು ವಿಮಾ ವ್ಯಾಪ್ತಿಯಲ್ಲಿದ್ದು , ಸರ್ಕಾರದೊಂದಿಗೆ ರೋಟರಿ ಕ್ಲಬ್ ಹಾಗೂ ಶಿಕ್ಷಕರ ಕ್ಷೇಮಾಭಿವೃದ್ಧಿ ನಿಧಿಗಳು ಸಂಯುಕ್ತವಾಗಿ ಪ್ರೀಮಿಯಂ ತುಂಬುತ್ತವೆ. ಪ್ರತಿ ವಿದ್ಯಾರ್ಥಿಯಿಂದ ಒಂದು ರುಪಾಯಿ ಪ್ರೀಮಿಯಂ ಪಡೆಯಲು ವಿಮಾ ಕಂಪನಿ ಒಪ್ಪಿಗೆ ನೀಡಿದೆ ಎಂದರು.
ಹ್ಯಾಂಡ್ಲೂಂ ಅಭಿವೃದ್ಧಿ ಪ್ರಾಧಿಕಾರ ಪೂರೈಸಿರುವ ಸಮವಸ್ತ್ರ ಪೂರೈಕೆ ವಿವಾದಕ್ಕೆ ಸಂಬಂಧಿಸಿದಂತೆ ಸಮವಸ್ತ್ರಗಳ ಗುಣಮಟ್ಟ ನಿರ್ಣಯಕ್ಕೆ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಸಮವಸ್ತ್ರದ ಗುಣಮಟ್ಟದಲ್ಲಿ ಯಾವುದೇ ರಾಜಿಗೆ ಸರ್ಕಾರ ಸಿದ್ಧವಿಲ್ಲ ಎಂದು ವಿಶ್ವನಾಥ್ ಸ್ಪಷ್ಟ ಪಡಿಸಿದರು.
(ಯುಎನ್ಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications