ಬಸವಕಲ್ಯಾಣ ಬಳಿ ಮ್ಯಾಕ್ಸಿಕ್ಯಾಬ್ಗಳ ಮುಖಾಮುಖಿ : 5 ಸಾವು
ಬಸವಕಲ್ಯಾಣ : ಅನುಭವ ಮಂಟಪದ ವಿದ್ಯುತ್ಚ್ಛಕ್ತಿ ಇಲಾಖೆಯ ಪವರ್ ಹೌಸ್ ಬಳಿ ಎರಡು ಮ್ಯಾಕ್ಸಿ ಕ್ಯಾಬ್ಗಳ ನಡುವೆ ಸಂಭವಿಸಿದ ಮುಖಾಮುಖಿಯಲ್ಲಿ ಐದು ಜನರು ಮೃತಪಟ್ಟು ಇತರ 14 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ.
ಗುರುವಾರ ಸುಮಾರು 8.30ರ ಸಮಯದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಹಿರನಗಾಂನ ಈಶ್ವರ ಈರಪ್ಪಾ (32), ಬಸವ ಕಲ್ಯಾಣದ ಚಂದ್ರಕಾಂತ ಶಂಕರ (45), ಹಣಮಂತ ಭೀಮಶ್ಯಾ (60) ಹಾಗೂ ಗುರುತು ಪತ್ತೆ ಆಗದ ಮತ್ತೊಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರವಾಗಿ ಗಾಯಗೊಂಡಿದ್ದ ಖೈರುನ್ನಿಸಾ ಎನ್ನುವವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಗಾಯಾಳುಗಳನ್ನು ಗುಲ್ಬರ್ಗಾ, ಸೋಲಾಪುರ್ ಹಾಗೂ ಬಸವಕಲ್ಯಾಣದ ಆಸ್ಪತ್ರೆಗೆ ಸೇರಿಸಲಾಗಿದೆ. ಡೊಂಗರಗಾವ್ನತ್ತ ಹೊರಟಿದ್ದ ಮ್ಯಾಕ್ಸಿ ಕ್ಯಾಬ್ ರಾಜ್ಯ ಸಾರಿಗೆ ಸಂಸ್ಥೆಯ ಬಸ್ನ್ನು ಹಿಂದೆ ಹಾಕುವ ಯತ್ನದಲ್ಲಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಮ್ಯಾಕ್ಸಿಕ್ಯಾಬ್ಗೆ ಡಿಕ್ಕಿ ಹೊಡಿಯಿತು ಎಂದು ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಉದ್ದರಿಸಿ ಮೂಲಗಳು ತಿಳಿಸಿವೆ.
ಬಸವಕಲ್ಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಕೆ.ಸಿಂಗ್ ಅವರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications