ರೈತನ ಕಣ್ಣೀರೊರೆಸಲು ‘1 ಕೋಟಿ ಕಿಸಾನ್ ಕಾರ್ಡ್ ಯೋಜನೆ’
ಚೆನ್ನೈ: ಪ್ರಸ್ತುತ ವರ್ಷದಲ್ಲಿ ರೈತರಿಗೆ ಸುಲಭ ಸಾಲ ದಕ್ಕುವಂತೆ ಮಾಡಲು 1 ಕೋಟಿ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಬಾಳಾ ಸಾಹೇಬ್ ವಿಖೆ ಪಾಟೀಲ್ ಹೇಳಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಸವಲತ್ತಿಗೆ ರೈತರಿಂದ ಕಂಡಾಪಟ್ಟೆ ಪ್ರತಿಕ್ರಿಯೆ ಬಂದಿದ್ದು, ಈವರೆಗೆ 50 ಲಕ್ಷ ರೈತರು ಕ್ರೆಡಿಟ್ ಕಾರ್ಡ್ ಪಡೆದಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳಡಿ ವಿಜಯಾ ಬ್ಯಾಂಕ್ ನೀಡಿದ ಸಾಲವನ್ನು ಆವಡಿಯಲ್ಲಿ ಗುರುವಾರ ವಿತರಿಸಿ, ಸಚಿವರು ಮಾತನಾಡುತ್ತಿದ್ದರು.
ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಧಿಯ ವ್ಯಾಪ್ತಿಯನ್ನು ಸರ್ಕಾರ ವಿಸ್ತರಿಸಿದ್ದು, ಗ್ರಾಮ ಪಂಚಾಯಿತಿಗಳು, ಸ್ವಸಹಾಯ ಗುಂಪುಗಳು ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಅನುಷ್ಟಾನಕ್ಕೆ ತರಲು ಇನ್ನಷ್ಟು ಹಣಕಾಸಿನ ನೆರವು ದೊರೆಯಲಿದೆ. ಸ್ವಸಹಾಯ ಗುಂಪುಗಳ ಉತ್ಸಾಹ ಹಾಗೂ ಕಳಕಳಿಯನ್ನು ಸರ್ಕಾರ ಮನಗಂಡಿದ್ದು, ಅವುಗಳಿಗೆ ಕೈಸಡಿಲಿಸಿ ದುಡ್ಡು ಕಾಸಿನ ಸಹಾಯ ಮಾಡುವಂತೆ ಬ್ಯಾಂಕುಗಳಿಗೆ ನಿರ್ದೇಶನ ಕೊಡಲಾಗಿದೆ ಎಂದರು.
ದೇಶದ ಎಲ್ಲಾ 6 ಲಕ್ಷ ಹಳ್ಳಿಗಳಲ್ಲೂ ಸ್ವಸಹಾಯ ಗುಂಪುಗಳು ಹುಟ್ಟಬೇಕು. ದಲ್ಲಾಲಿಗಳ- ಮಧ್ಯವರ್ತಿಗಳ ಸ್ವಾರ್ಥಕ್ಕೆ ಬಲಿಪಶು ಆಗುತ್ತಿರುವ ರೈತನ ಕಣ್ಣೀರನ್ನು ಅವು ಒರೆಸಬೇಕು. ಅನ್ನ- ಬಟ್ಟೆ, ಮನೆ- ಶಾಲೆ ಇಂಥ ಮೂಲಭೂತ ಅಗತ್ಯಗಳನ್ನು ಕಡು ಬಡ ರೈತರು ಪೂರೈಸಿಕೊಳ್ಳಲು ನೆರವಾಗಬೇಕು ಎಂದು ಸಲಹೆ ಕೊಟ್ಟರು.
(ಪಿಟಿಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications