ಮುಖ್ಯಮಂತ್ರಿ ಕೃಷ್ಣರಿಂದಸಾರ್ವಜನಿಕರ ಧರ್ಮದರ್ಶನ ಕಾರ್ಯಕ್ರಮ
ಬೆಂಗಳೂರು : ಹಿಂದೆ ರಾಜ ಮಹಾರಾಜರು ಪ್ರಜೆಗಳ ಕುಂದು ಕೊರತೆ ವಿಚಾರಿಸಲು ಅರಮನೆಯ ಪ್ರವೇಶ ದ್ವಾರದಲ್ಲಿ ನ್ಯಾಯದ ಗಂಟೆ ಕಟ್ಟುತ್ತಿದ್ದರಂತೆ. ನ್ಯಾಯ ಕೋರಿ ಗಂಟೆ ಬಾರಿಸುವವರನ್ನು ಭೇಟಿ ಮಾಡಿ, ಪರಿಹಾರ ಸೂಚಿಸುತ್ತಿದ್ದರಂತೆ. ಇದು ಪ್ರಜಾಪ್ರಭುತ್ವ. ಪ್ರಜೆಗಳೇ ಪ್ರಭುಗಳು. ಈ ಪ್ರಜೆಗಳ ಪ್ರತಿನಿಧಿಗಳನ್ನು ಜನಸಾಮಾನ್ಯರು ಕಾಣಲು ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿ ಇದೆ.
ಹೀಗಾಗಿ ರಾಜ್ಯದ ಮುಖ್ಯಮಂತ್ರಿಗಳು ಧರ್ಮದರ್ಶನದ ಕಾರ್ಯಕ್ರಮ ನಡೆಸುವುದು ಹೊಸ ವಿಷಯವೇನಲ್ಲ. ಈಗ ಹೈಟೆಕ್ ಮುಖ್ಯಮಂತ್ರಿ ಕೃಷ್ಣ ಕೂಡ ಜನಸಾಮಾನ್ಯರನ್ನು ಧರ್ಮದರ್ಶನ ಸಮಯದಲ್ಲಿ ಭೇಟಿ ಮಾಡಲು ನಿರ್ಧರಿಸಿದ್ದಾರೆ. ಹಿಂದಿನ ಕೆಲವು ಮುಖ್ಯಮಂತ್ರಿಗಳೂ ಮುಖ್ಯವಾಗಿ ದೇವರಾಜ ಅರಸು, ಗುಂಡೂರಾವ್, ರಾಮಕೃಷ್ಣ ಹೆಗಡೆ ಈ ರೀತಿಯ ಧರ್ಮದರ್ಶನ ದಯಪಾಲಿಸಿದ್ದರು.
ತಮ್ಮ ಹಿರಿಯರ ಹಾದಿಯಲ್ಲಿ ಈಗ ಮುಖ್ಯಮಂತ್ರಿ ಕೃಷ್ಣ ಅವರು ಹೆಜ್ಜೆ ಇಡ ತೊಡಗಿದ್ದಾರೆ. ಸರ್ಕಾರಿ ರಜಾ ದಿನ ಮತ್ತು ಭಾನುವಾರಗಳನ್ನು ಹೊರತು ಪಡಿಸಿ, ಉಳಿದಂತೆ ತಮ್ಮ ಅಧಿಕೃತ ನಿವಾಸ ಕೃಷ್ಣಾ ದಲ್ಲಿ ಬೆಳಗ್ಗೆ 9ರಿಂದ 9-30ರವರೆಗೆ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಆಲಿಸಲಿದ್ದಾರೆ. ಅಂತೆಯೇ ಪ್ರತಿದಿನ 9.30ರಿಂದ 10.30ರವರೆಗೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರನ್ನೂ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯಾಲಯದ ಪತ್ರಿಕಾ ಪ್ರಕಟಣೆ ಈ ವಿಷಯ ತಿಳಿಸಿದೆ.
ನೀವೂ ದೊರೆತನಕ ದೂರು ಕೊಂಡೊಯ್ಯಬೇಕೆ? ನಿಮ್ಮ ಕುಂದು ಕೊರತೆಗಳನ್ನು ಮುಖ್ಯಮಂತ್ರಿಗಳೊಂದಿಗೆ ಹೇಳಿಕೊಳ್ಳಬೇಕೇ? ಹಾಗಾದರೆ, ತಡವೇಕೆ, ಧರ್ಮದರ್ಶನ ಪಡೆಯಲು ಸಿದ್ಧರಾಗಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications