ಭಾನುವಾರ ನಗರದಲ್ಲಿ ನಡೆಯಬೇಕಿದ್ದ ನೆಡುಮಾರನ್ ಸನ್ಮಾನ ರದ್ದು
ಬೆಂಗಳೂರು : ಅಗ್ನಿ ಬಳಗ ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ತಮಿಳು ರಾಷ್ಟ್ರೀಯವಾದಿ ಚಳವಳಿ ನಾಯಕ ಪಿ. ನೆಡುಮಾರನ್ ಸನ್ಮಾನ ಸಮಾರಂಭ ಹಠಾತ್ ರದ್ದಾಗಿದೆ. ಸನ್ಮಾನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ವ್ಯಕ್ತವಾದ ವಿರೋಧದ ಹಿನ್ನೆಲೆಯಲ್ಲಿ ಮನನೊಂದ ನೆಡುಮಾರನ್, ಸನ್ಮಾನ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದರಿಂದ ಈ ಕಾರ್ಯಕ್ರಮ ರದ್ದು ಪಡಿಸಲಾಗಿದೆ.
ವೀರಪ್ಪನ್ ಒತ್ತೆಯಿಂದ ವರನಟ ರಾಜ್ಕುಮಾರ್ ಅವರನ್ನು ಸುರಕ್ಷಿತವಾಗಿ ಬಿಡಿಸಿಕೊಂಡು ಬಂದ ನೆಡುಮಾರನ್ ಅವರನ್ನು ಸನ್ಮಾನಿಸಲು ಸಂಘಟಕರು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಸಾಗರ ಸಂಗಮ ಎಂಬ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ ದಂಪತಿಗಳೂ ಸಮ್ಮತಿಸಿದ್ದರು.
ಬದಲಾದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಏರ್ಪಡಿಸಿದ್ದ ರಾಷ್ಟ್ರದ ಹಿತಕ್ಕಾಗಿ ರಾಜ್ಯಗಳ ಸ್ವಾಯತ್ತತೆ ವಿಷಯ ಕುರಿತ ವಿಚಾರ ಸಂಕಿರಣವನ್ನೂ ಮುಂದೂಡಲಾಗಿದೆ. ಈ ವಿಷಯವನ್ನು ಅಗ್ನಿ ಪತ್ರಿಕೆಯ ಸಂಪಾದಕ ಶ್ರೀಧರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಅನುಮತಿ ನಿರಾಕರಣೆ : ಕನ್ನಡ ಪರ ಸಂಘಟನೆಗಳು ನೆಡುಮಾರನ್ ಸನ್ಮಾನಕ್ಕೆ ವಿರೋಧ ವ್ಯಕ್ತ ಪಡಿಸಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರಬಹುದೆಂಬ ಕಾರಣದಿಂದ ಈ ಸಮಾರಂಭ ನಡೆಸಲು ಅನುಮತಿ ನಿರಾಕರಿಸುವಂತೆ ಕೋರಿ ಸ್ಥಳೀಯ ಪೊಲೀಸರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದೂ ಗೊತ್ತಾಗಿದೆ.
ಮಡಿಯಾಳ್ - ರಾಜ್ ಭೇಟಿ: ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದ ಡಾ. ರಾಜ್ಕುಮಾರ್ ಅವರ ಮನೆಗೆ ತೆರಳಿದ ರಾಜ್ಯದ ಸಚಿವರು ಹಾಗೂ ಪೊಲೀಸ್ ಕಮೀಷನರ್ ಮಡಿಯಾಳ್ ಬಹುಕಾಲ ಮಾತುಕತೆ ನಡೆಸಿ ಹೊರಬಂದ ಬೆನ್ನಲ್ಲೇ ಕಾರ್ಯಕ್ರಮ ಮುಂದೂಡಿಕೆಯಾದಯ - ರದ್ದಾದ ವಿಷಯ ಹೊರಬಿದ್ದಿದೆ.
ಕೃಷ್ಣ - ಕರುಣಾನಿಧಿ ಮಾತುಕತೆ: ಈ ಮಧ್ಯೆ ಮುಖ್ಯಮಂತ್ರಿ ಕೃಷ್ಣ ಅವರು, ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರೊಂದಿಗೆ ಮಾತುಕತೆ ನಡೆಸಿ, ಭಾನುವಾರ ನಗರದಲ್ಲಿ ನಡೆಯುವ ಸನ್ಮಾನ ಸಮಾರಂಭದಲ್ಲಿ ನೆಡುಮಾರನ್ ಪಾಲ್ಗೊಳ್ಳದಂತೆ ಮನವೊಲಿಸಿ ಎಂದು ಕೋರಿದ್ದರು ಎಂದೂ ಮೂಲಗಳಿಂದ ತಿಳಿದುಬಂದಿದೆ.
ಈ ಇಬ್ಬರು ಮುಖ್ಯಮಂತ್ರಿಗಳ ಮಾತುಕತೆಯ ಫಲಶ್ರುತಿಯಿಂದಾಗಿ ನೆಡುಮಾರನ್ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದರು ಎನ್ನಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications