ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಜ್ಯದಿಂದ ಹಿಂದಡಿ ಇಟ್ಟ ಮುಂಗಾರು
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಅಲ್ಲಲ್ಲಿ ಚದುರಿದಂತೆ ಸುರಿದ ಮಳೆ ಹಿಂದೆ ಸರಿದಿದೆ. ಮುಂಗಾರು ರಾಜ್ಯದಿಂದ ಹಿಂದಡಿ ಇಟ್ಟಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಒಣಹವೆ ಮುಂದುವರಿದಿದೆ. ಆದರೆ, ಉತ್ತರ ಒಳನಾಡಿನ ಕೆಲವು ಕಡೆ ಕನಿಷ್ಠ ತಾಪಮಾನದಲ್ಲಿ ಇಳಿಕೆ ಕಂಡುಬಂದಿದೆ.
ರಾಜ್ಯದ ಅತಿ ಕನಿಷ್ಠ ಉಷ್ಣಾಂಶ ಗುಲ್ಬರ್ಗಾದಲ್ಲಿ 12.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿಯ ಕೆಲವೆಡೆ ಕೂಡ ಕನಿಷ್ಠ ತಾಪಮಾನದಲ್ಲಿ ಅಲ್ಪ ಬದಲಾವಣೆಯಾಗಿದೆ.
ಹವಾಮಾನ ವೀಕ್ಷಣಾಲಯ ನೀಡಿರುವ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದ್ದು, ವಿಶೇಷವಾದ ಬದಲಾವಣೆಗಳೇನೂ ಕಂಡುಬರುವುದಿಲ್ಲ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಭ್ರ ಆಕಾಶ ಇದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸಾಧ್ಯತೆ ಇದೆ.
Comments
Story first published: Wednesday, January 24, 2001, 5:30 [IST]