ಕರಾವಳಿ ಜಿಲ್ಲೆಗಳಲ್ಲಿ 907 ಕಿಂಡಿ ಅಣೆಕಟ್ಟುಗಳ ನಿರ್ಮಾಣ ಯೋಜನೆ
ಮಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಕಿಂಡಿ ಅಣೆಕಟ್ಟು ನಿರ್ಮಿಸುವ 145.5 ಕೋಟಿ ರುಪಾಯಿಗಳ ಸಮಗ್ರ ಯೋಜನೆ ‘ಪಶ್ಚಿಮ ವಾಹಿನಿ’ಯನ್ನು ಸರ್ಕಾರ ಸಿದ್ಧಪಡಿಸಿದೆ.
ರಾಜ್ಯ ಸಣ್ಣ ನೀರಾವರಿ ಸಚಿವ ಕುಮಾರ್ ಬಂಗಾರಪ್ಪ ಶನಿವಾರ ಇಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿದರು. ಈ ಯೋಜನೆಯಡಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 907 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು . ಅವುಗಳ ನಿರ್ವಹಣೆಗಾಗಿ ನೀರು ಬಳಕೆದಾರರ ಸಂಘಗಳನ್ನೂ ರಚಿಸಲಾಗುವುದು ಎಂದರು.
ಪಶ್ಚಿಮ ವಾಹಿನಿ ಒಂದು ಸಮಗ್ರ ಯೋಜನೆಯಾಗಿದ್ದು, ಇದರಲ್ಲಿ ಒಳನಾಡು ಮೀನುಗಾರಿಕೆ, ಕಿರು ಜಲ ವಿದ್ಯುತ್ ಯೋಜನೆ ಹಾಗೂ ಏತ ನೀರಾವರಿ ಯೋಜನೆಗಳೂ ಸೇರಿವೆ. ಯೋಜನೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 259, ಉಡುಪಿಯಲ್ಲಿ 451 ಹಾಗೂ ಉತ್ತರ ಕನ್ನಡದಲ್ಲಿ 197 ಅಣೆಕಟ್ಟುಗಳು ನಿರ್ಮಾಣವಾಗಲಿವೆ ಎಂದು ಕುಮಾರ್ ಬಂಗಾರಪ್ಪ ವಿವರಿಸಿದರು.
ಸುದ್ದಿಗೋಷ್ಠಿಗೆ ಮುನ್ನ ಸಚಿವರು ಪಶ್ಚಿಮ ವಾಹಿನಿ ಯೋಜನೆಯ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು. ಯೋಜನೆಯ ಸಂಯೋಜಕ ಡಾ. ವೀರೇಂದ್ರ ಹೆಗ್ಗಡೆ ಕೂಡ ಹಾಜರಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications