ನಿಷೇಧಾಜ್ಞೆ ಮುರಿದ ಭಕ್ತರು : ರಾಣಿಬೆನ್ನೂರಲ್ಲಿ ಅಶ್ರುವಾಯು
ರಾಣಿಬೆನ್ನೂರು : ಭಾನುವಾರ ರಾತ್ರಿ ಎರಡು ಅಂಗಡಿಗಳು ಸುಟ್ಟು ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮೂರ್ತಿ ಉತ್ಸವಗಳನ್ನು ಮಾಡಕೂಡದೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ಅದನ್ನು ನಿರ್ಲಕ್ಷಿಸಿದ ಜನರ ಮೇಲೆ ಪೊಲೀಸರು ಸೋಮವಾರ ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿದರು.
ನಗರದಲ್ಲಿ ಉದ್ರಿಕ್ತ ಪರಿಸ್ಥಿತಿಯ ಕಾರಣ ಅಪರಾಧಿ ಪ್ರಕ್ರಿಯಾ ಸಂಹಿತೆ 144ನೇ ಪರಿಚ್ಛೇದದನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಸೋಮವಾರ ಚೌಡೇಶ್ವರಿ ಜಾತ್ರೆ. ಉತ್ಸವ ಮಾಡಕೂಡದೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ಕೆಲ ಜನ ರಾತ್ರಿ 9 ಗಂಟೆ ಸುಮಾರಿಗೆ ಗಂಗಾಜಲ ಚೌಡೇಶ್ವರಿ ಮತ್ತು ತುಂಗಾಜಲ ಚೌಡೇಶ್ವರಿ ಮೂರ್ತಿಗಳ ಮೆರವಣಿಗೆ ನಡೆಸಲು ಮುಂದಾದರು. ಪೊಲೀಸರು ಜನರನ್ನು ನಿಯಂತ್ರಿಸಲು ಅನಿವಾರ್ಯವಾಗಿ ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಬೇಕಾಯಿತು.
ಅಸಮಾಧಾನಗೊಂಡಿದ್ದ ಭಕ್ತರಿಗೆ ಸೋಮವಾರ ರಾತ್ರಿಗೆ ಬದಲಾಗಿ ಮಂಗಳವಾರ ಬೆಳಗಿನ ಜಾವ ಮೆರವಣಿಗೆ ನಡೆಸಲು ಜಿಲ್ಲಾಧಿಕಾರಿ ಟಿ. ಮುಕ್ತಾಂಬ ಶಾಂತಿ ಸಭೆಯಲ್ಲಿ ಅನುಮತಿ ಕೊಟ್ಟಿದ್ದರೂ, ಭಕ್ತರು ಅದಕ್ಕೆ ಓಗೊಡಲಿಲ್ಲ. ಪರಿಸ್ಥಿತಿ ಇನ್ನೂ ಬಿಗುವಾಗಿದ್ದು, ಗಲ್ಲಿ ಗಲ್ಲಿಗಳಲ್ಲಿ ಪೊಲೀಸ್ ಪಹರೆ ಹಾಕಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications