ಬೆಂಗಳೂರಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆಚಂಪಾ ವಿರೋಧ
ಬೆಳಗಾವಿ : ಬೆಂಗಳೂರಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಹಾಗೂ ರಾಜ್ಯದಲ್ಲಿ ತಮಿಳು ದ್ವಿತೀಯ ಭಾಷೆಯಾಗಬೇಕು ಎಂಬ ನೆಡುಮಾರನ್ ಅವರ ಒತ್ತಾಯವನ್ನು ತಾವು ವಿರೋಧಿಸುವುದಾಗಿ ಕನ್ನಡ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ್ ಮಂಗಳವಾರ ಹೇಳಿದರು.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿರುವ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ನೆಡುಮಾರನ್ ಅವರ ಬಗೆಗೆ ನನಗೆ ಅಪಾರ ಗೌರವವಿದೆ. ಹಾಗಂತ ಅವರು ಹೇಳುವ ಎಲ್ಲಕ್ಕೂ ಸಹಮತ ವ್ಯಕ್ತಪಡಿಸಬೇಕಾಗಿಲ್ಲ. ಕನ್ನಡ ಹಾಗೂ ತಮಿಳು ಸಮುದಾಯದವರನ್ನು ದೂರ ಮಾಡಲು ತಿರುವಳ್ಳುವರ್ ಪ್ರತಿಮೆಯಾಂದೇ ಸಾಕು. ಈ ಕಾರಣ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಕೂಡದು ಎಂದು ಅಭಿಪ್ರಾಯ ಪಟ್ಟರು.
ಬೆಂಗಳೂರಿನಲ್ಲಿ ಅಗ್ನಿ ಪತ್ರಿಕಾ ಬಳಗ ನೆಡುಮಾರನ್ ಅವರನ್ನು ಸನ್ಮಾನಿಸಲು ಯೋಜಿಸಿದ್ದ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡ ಅವರು, ರಾಜ್ಕುಮಾರ್ ಬಿಡುಗಡೆಗೆ ನೆಡುಮಾರನ್ ಅವರೇ ಕಾರಣ. ಯಾರಾದರೂ ಸಹಾಯ ಮಾಡಿದರೆ ಅವರನ್ನು ಗೌರವಿಸುವುದು ಪ್ರಜ್ಞಾವಂತರ ಕರ್ತವ್ಯ. ಅವರು ಮಾಡಿರುವ ಮಹತ್ಕಾರ್ಯಕ್ಕೆ ಕೃತಜ್ಞತೆ ಅರ್ಪಿಸುವುದು ಸಮಯೋಚಿತವಾದದ್ದು ಎಂದರು.
ತಿರುವಳ್ಳುವರ್ ಕಾಲದಲ್ಲಿ ತಮಿಳು ಹಾಗೂ ಕನ್ನಡ ಬೇರೆ ಬೇರೆ ಭಾಷೆಗಳಾಗಿರಲಿಲ್ಲ. ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ವಿರೋಧಿಸುವಂಥ ಪರಿಸ್ಥಿತಿ ಆಗ ಇರಲಿಲ್ಲ. ಆದರೆ ಈ ಹೊತ್ತು ಪ್ರತಿಮೆ ಅನಾವರಣದಿಂದ ಉಭಯ ಭಾಷಿಕರಲ್ಲಿ ಸಾಮರಸ್ಯ- ಬಾಂಧವ್ಯಕ್ಕೆ ಹೊಡೆತ ಬೀಳುವ ಸಾಧ್ಯತೆಯಿದೆ. ಯಾಕೆಂದರೆ ತಿರುವಳ್ಳುವರ್ ಪ್ರತಿಮೆ ಅನಾವರಣ ತಮಿಳರ ಸ್ವಾಭಿಮಾನದ ಸಂಕೇತವಾಗಿದೆ ಎಂದು ಚಂಪಾ ಹೇಳಿದರು.
ನಮ್ಮ ರಾಜ್ಯದಲ್ಲಿ ತಮಿಳರು ಮುಖ್ಯವಾಹಿನಿಯಲ್ಲಿ ಬೆರೆಯದಿರಲು ಮುಖ್ಯ ಕಾರಣ ತಮಿಳುನಾಡಿನ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳ ಸ್ವಾರ್ಥ ರಾಜಕೀಯ ಎಂಬ ಪಿ.ಷಣ್ಮುಗಂ ಅವರ ಮಾತು ಅಕ್ಷರಶಃ ಸತ್ಯ ಎಂದು ಚಂಪಾ ಅಭಿಪ್ರಾಯ ಪಟ್ಟರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications