ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ವಿಕಲಾಂಗರಿಗೆ ಉದ್ಯೋಗಾವಕಾಶ : ಕೃಷ್ಣ
ಬೆಂಗಳೂರು : ಇನ್ನು ಮುಂದೆ ದೈಹಿಕ ಅಂಗವಿಕತೆ ಉಳ್ಳವರಿಗೆ ಅನುಕೂಲ ಆಗುವ ರೀತಿಯಲ್ಲಿ ಸಾರ್ವಜನಿಕ ಕಟ್ಟಡಗಳನ್ನು ವಿನ್ಯಾಸಗೊಳಿಸಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬುಧವಾರ ಇಲ್ಲಿ ತಿಳಿಸಿದರು.
ಸಾರ್ವಜನಿಕ ಕಟ್ಟಡಗಳಾದ ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳಲ್ಲಿ ಮೆಟ್ಟಿಲುಗಳ ಪಕ್ಕದಲ್ಲಿ ಇಳಿಜಾರು, ಶೌಚಾಲಯಗಳಲ್ಲಿ ಕಮೋಡ್ಗಳನ್ನು ಅಳವಡಿಸಲಾಗುವುದು, ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವ ಮುನ್ನ ಈ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂಬ ನಿರ್ಬಂಧ ಹಾಕಲಾಗುವುದು ಎಂದರು. ಹಾಲಿ ಕಾಯಿದೆಯಲ್ಲೇ ಅಂಗವಿಕಲರಿಗೆ ಅನುಕೂಲವಾಗುವ ರೀತಿಯಲ್ಲಿ ಸಾರ್ವಜನಿಕ ಕಟ್ಟಡಗಳು ಇರಬೇಕು ಎಂಬ ನಿಯಮ ಇದೆ. ಆದರೆ, ಅದು ಸಮರ್ಪಕವಾಗಿ ಜಾರಿಗೆ ಬಂದಿಲ್ಲ ಎಂದೂ ಕೃಷ್ಣ ವಿಷಾದಿಸಿದರು.
ಐಟಿ ಕ್ಷೇತ್ರದಲ್ಲಿ ಮೀಸಲು: ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಅಂಗವಿಕಲರಿಗೆ ಉದ್ಯೋಗಾವಕಾಶಗಳನ್ನು ನೀಡುವ ಕುರಿತಂತೆ ಬುಧವಾರ ನಡೆದ ದುಂಡು ಮೇಜಿನ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಕೃಷ್ಣ ಈ ವಿಷಯ ತಿಳಿಸಿದರು.
ಐ.ಟಿ. ಕ್ಷೇತ್ರದಲ್ಲಿ ನಾಗಾಲೋಟದಲ್ಲಿ ಸಾಗುತ್ತಿರುವ ರಾಜ್ಯದಲ್ಲಿ ಅಂಗವಿಕಲರಿಗೂ ಅವಕಾಶ ನೀಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದ ಅವರು, ಮೈಸೂರು, ಬೆಂಗಳೂರು ಸೇರಿದಂತೆ ಆರು ಶಾಲೆಗಳಲ್ಲಿ ಅಂಗವಿಕಲರಿಗೆ ಕಂಪ್ಯೂಟರ್ ತರಬೇತಿ ನೀಡಲು ರೋಟರಿ ಸಂಸ್ಥೆ ಮುಂದೆ ಬಂದಿದೆ ಎಂದು ತಿಳಿಸಿದರು.
ಐ.ಟಿ ಕ್ಷೇತ್ರ ಸೇರಿದಂತೆ ಸರ್ಕಾರಿ ಉದ್ಯೋಗದಲ್ಲಿ ಅಂಗವಿಕಲರಿಗೆ ಶೇ. 3ರಷ್ಟು ಮೀಸಲಾತಿ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು. ಈ ಸಂದರ್ಭದಲ್ಲಿ ಹಾಜರಿದ್ದ ಮಾಹಿತಿ ತಂತ್ರಜ್ಞಾನದ ಕಾರ್ಯದರ್ಶಿ ವಿವೇಕ್ ಕುಲಕರ್ಣಿ ಅವರು, ಅಂಗವಿಕಲರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಬೆಂಗಳೂರಿನ 70ಕ್ಕೂ ಹೆಚ್ಚು ಸಂಸ್ಥೆಗಳಿಗೆ ರಾಜ್ಯದ ವಿವಿಧ ಕಂಪ್ಯೂಟರ್ ಕಂಪನಿಗಳಿಂದ ಕಂಪ್ಯೂಟರ್ ಒದಗಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮತ್ತು ಮಾಹಿತಿ ತಂತ್ರಜ್ಞಾನ ವಲಯ ಮತ್ತು ಕಾರ್ಪೊರೇಟ್ ವಲಯದಲ್ಲಿ ಕೂಡ ಅಂಗವಿಕಲರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ ಸಂಬಂಧ ದುಂಡು ಮೇಜಿನ ಪರಿಷತ್ತಿನಲ್ಲಿ ಚರ್ಚಿಸಲಾಯಿತು ಎಂದು ಅಂಗವಿಕಲರಿಗೆ ಉದ್ಯೋಗ ಉತ್ತೇಜನದ ರಾಷ್ಟೀಯ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಜಾವೆದ್ ಅಬಿದಿ ತಿಳಿಸಿದರು. ಈ ಸಂಬಂಧ ಮಾಹಿತಿ ಬ್ಯಾಂಕ್ ಸ್ಥಾಪಿಸಲಾಗುವುದೆಂದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications