ಮಕರ ಜ್ಯೋತಿ, ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ವಿಶೇಷ ವ್ಯವಸ್ಥೆ
ಶಬರಿ ಮಲೆ : ಜನವರಿ 14ರಂದು ಮಕರ ಸಂಕ್ರಾಂತಿ. ಶಬರಿಮಲೆಯ ಅಯ್ಯಪ್ಪನ ಸನ್ನಿಧಾನದ ಪೊನ್ನಂಬಲ ಮೇಡ್ನಲ್ಲಿ ಅಂದು ಪ್ರಕಟಗೊಳ್ಳುವ ಮಕರ ಜ್ಯೋತಿಯ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಭಕ್ತರ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸಂಚಾರದ ಅಡೆತಡೆ ತಪ್ಪಿಸಲು ಮಂಡಳಿಯು ಹೊಸ ಸರತಿಯ ಸಾಲು ಪದ್ಧತಿಯನ್ನು ಈ ಸಾಲಿನಿಂದ ಆರಂಭಿಸುತ್ತಿದೆ. ಈ ಹೊಸ ಪದ್ಧತಿಯಲ್ಲಿ 50 ಭಕ್ತರ ಗುಂಪುಗಳನ್ನು ಮಾಡಿ, ದೇವಾಲಯಕ್ಕೆ ಪ್ರವೇಶ ನೀಡಲಾಗುವುದು ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.
ಶಬರಿಮಲೆಯಲ್ಲಿ ಹರಿಯುವ ಪಂಪಾ ನದಿಯ ಶುದ್ಧೀಕರಣಕ್ಕೆ 1.64 ಕೋಟಿ ರುಪಾಯಿಗಳ ಯೋಜನೆಯನ್ನು ಸಹ ಕೈಗೆತ್ತಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸಾದ ವಿನಿಯೋಗಕ್ಕೂ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ತಿರುವಾಂಕೂರು ದೇವಸ್ವಂ ಮಂಡಳಿ ಅಯ್ಯಪ್ಪ ಸ್ವಾಮಿಯ ನಾಲ್ಕು ಉಪ ದೇವಾಲಯಗಳನ್ನು ನವೀಕರಿಸಲೂ ತೀರ್ಮಾನಿಸಿದೆ. ಈ ಉಪ ದೇವಾಲಯಗಳಲ್ಲಿ ವಸತಿ ವ್ಯವಸ್ಥೆ, ಉಪಹಾರ ಗೃಹ ಮತ್ತು ಮಹಿಳಾ ಭಕ್ತಾದಿಗಳಿಗಾಗಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದೂ ಮಂಡಳಿಯ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ನಕಲಿ ಪ್ರಸಾದದ ಅಂಗಡಿಗಳ ಮೇಲೆ ದಾಳಿ : ಪಂಪಾ ಮತ್ತು ಅಯ್ಯಪ್ಪನ ಸನ್ನಿಧಾನದ ಸುತ್ತಮುತ್ತ ನಕಲಿ ಪ್ರಸಾದಗಳನ್ನು ಕವರ್ಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದ ದೂರಿನ ಮೇರೆಗೆ ದೇವಸ್ವಂ ಮಂಡಳಿಯ ಸದಸ್ಯರಾದ ಪ್ರೊ. ಡಿ. ಶಶಿಧರನ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ಕೆಲವು ಅಂಗಡಿಗಳ ಮೇಲೆ ದಾಳಿ ಮಾಡಿ ನಕಲಿ ಪ್ರಸಾದಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications