ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಉನ್ನತ ಶಿಕ್ಷಣ, ವೃತ್ತಿಯಲ್ಲಿ ಆದ್ಯತೆ
ಬೆಂಗಳೂರು : ಒಂದರಿಂದ ಹತ್ತನೇ ಇಯತ್ತೆವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿ ಹಾಗೂ ಉನ್ನತ ಶಿಕ್ಷಣದಲ್ಲಿ ಆದ್ಯತೆ ಕೊಡುವ ಆದೇಶವನ್ನು ತಕ್ಷಣ ಹೊರಡಿಸಬೇಕೆಂದು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮುಖ್ಯಕಾರ್ಯದರ್ಶಿಗಳಿಗೆ ಬುಧವಾರ ತಿಳಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪುರಭವನದಲ್ಲಿ ಆಯೋಜಿಸಿದ್ದ ಧಾರ್ಮಿಕ ಮತ್ತು ಭಾಷಾ ಅಲ್ಪ ಸಂಖ್ಯಾತರಿಗೆ ಕನ್ನಡ ಕಲಿಕೆ ಯೋಜನೆಯನ್ನು ಉದ್ಘಾಟಿಸಿ ಅವರು ಮಾತಾಡುತ್ತಿದ್ದರು. ರಾಜ್ಯದಲ್ಲಿನ ಉರ್ದು ಶಾಲೆಗಳಿಗೆ ಗುತ್ತಿಗೆ ಆಧಾರದ ಮೇಲೆ ಕನ್ನಡ ಅಧ್ಯಾಪಕರನ್ನು ನೇಮಿಸಬೇಕು. ಉನ್ನತ ಶಿಕ್ಷಣ ಹಾಗೂ ವೃತ್ತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಆದ್ಯತೆ ಕೊಡಬೇಕು. ಈ ಎರಡೂ ಆದೇಶಗಳನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಈ ಸಭೆಯಲ್ಲೇ ನೀಡುತ್ತಿದ್ದೇನೆ ಎಂದರು.
ಈ ಎರಡೂ ಪ್ರಕಟಣೆಗಳಿಂದ ಕನ್ನಡ ಕಲಿಕೆಗೆ ರಾಜ್ಯದಲ್ಲಿ ಒತ್ತು ಸಿಕ್ಕಂತಾಗುತ್ತದೆ. ಬೋಧಿಸುವವರೇ ಇಲ್ಲದಿದ್ದಲ್ಲಿ ಕನ್ನಡ ಕಲಿಯಲು ಹೇಗೆ ಸಾಧ್ಯ? ಕೇವಲ ಸುತ್ತೋಲೆಗಳಿಂದ ಕನ್ನಡ ಭಾಷೆ ಮೇಲೆತ್ತಲು ಸಾಧ್ಯವಿಲ್ಲ ಇದಕ್ಕೆ ಜನರ ಸಹಕಾರ ಅತಿ ಮುಖ್ಯ ಎಂದು ಕೃಷ್ಣ ಅಭಿಪ್ರಾಯ ಪಟ್ಟರು.
ಸರ್ಕಾರ ಈವರೆಗೂ ಕನ್ನಡ ಭಾಷೆ ಬಳಸುವಂತೆ 250 ಸುತ್ತೋಲೆಗಳನ್ನು ಹೊರಡಿಸಿದೆ. ಆದರೆ ಅವೆಲ್ಲಾ ಅನುಷ್ಠಾನಕ್ಕೆ ಬರುತ್ತಿವೆಯೇ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಪ್ರಶ್ನಿಸಿದರು.
ಇದೇ ಸಮಾರಂಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಯೋಜನೆಗಳ ಕೈಪಿಡಿಯನ್ನೂ ಮುಖ್ಯಮಂತ್ರಿ ಕೃಷ್ಣ ಬಿಡುಗಡೆ ಮಾಡಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications