ಸಿಲಿಕಾನ್ ಸಿಟಿಯ ಉತ್ಕರ್ಷಕ್ಕೆ ಕುವೆಂಪುವಿಚಾರಧಾರೆ - ಎಸ್.ಎಂ. ಕೃಷ್ಣ
(ಮಂಗಳೂರು ಪ್ರತಿನಿಧಿಯಿಂದ)
ಸುಳ್ಯ : ಕುವೆಂಪು ಪ್ರತಿಪಾದಿಸಿದ ವೈಚಾರಿಕತೆ ಹಾಗೂ ವೈಜ್ಞಾನಿಕತೆಗಳ ಸಂಗಮದಿಂದ ಸಿಲಿಕಾನ್ ಸಿಟಿಯ ಉಗಮ, ಉತ್ಕರ್ಷ ಸಾಧ್ಯ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತದೆ ಎನ್ನುವ ಆತಂಕ ಬೇಡ. ಸರ್ಕಾರ ರಚಿಸಿರುವ ಮಾಹಿತಿ ತಂತ್ರಜ್ಞಾನ ಶಿಕ್ಷಣ ಮಂಡಳಿಯು ಹೊಸ ಕಾಲೇಜುಗಳ ಶಿಕ್ಷಣದ ಗುಣಮಟ್ಟದ ಮೇಲೆ ನಿಗಾ ಇಡಲಿದೆ ಎಂದು ಕೃಷ್ಣ ಭರವಸೆ ನೀಡಿದರು.
ರಾಜ್ಯಸರ್ಕಾರ ಹೊಸದಾಗಿ 40 ಇಂಜಿನಿಯರಿಂಗ್ ಕಾಲೇಜುಗಳ ಸ್ಥಾಪನೆಗೆ ಅವಕಾಶ ನೀಡಿರುವುದರಿಂದ ಖಂಡಿತವಾಗಿಯೂ ಶಿಕ್ಷಣದ ಗುಣಮಟ್ಟ ಕುಸಿಯಲಾರದು ಎನ್ನುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಸರ್ಕಾರದ ಖಾಸಗಿ ಸಹಭಾಗಿತ್ವದ ಬಗ್ಗೆ ಕೇಳಿ ಬರುತ್ತಿರುವ ಟೀಕೆಗಳನ್ನು ತಾವು ಗಮನಿಸುತ್ತಿರುವುದಾಗಿ ತಿಳಿಸಿದರು.
ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಆವರಣದಲ್ಲಿ ಶುಕ್ರವಾರ, ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ಮತ್ತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಅವರು ಶಿಲ್ಪಿ ಕುರುಂಜಿ ವೆಂಕಟ್ರಮಣ ಗೌಡ ಅವರ ಜೀವನ ಚರಿತ್ರೆಯನ್ನಾಧರಿಸಿ ಗಿರೀಶ್ ಕಾಸರವಳ್ಳಿ ತಯಾರಿಸುತ್ತಿರುವ ಸಾಕ್ಷ್ಯಚಿತ್ರಕ್ಕೆ ಕ್ಲಾಪ್ ಮಾಡಿದರು ಹಾಗೂ ಕಾಲೇಜಿನ ಇನ್ಫರ್ಮೇಶನ್ ಟೆಕ್ನಾಲಜಿ ವಿಭಾಗವನ್ನು ಉದ್ಘಾಟಿಸಿದರು.
ಗ್ರಾಮೀಣ ವಿದ್ಯಾಸಂಸ್ಥೆಗಳ ಬಗ್ಗೆ ಕಾಳಜಿ : ಗ್ರಾಮೀಣ ಪ್ರದೇಶಗಳಲ್ಲಿ ಸುಸಜ್ಜಿತ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಕೃಷ್ಣ ಪ್ರಕಟಿಸಿದರು. ವಿಜ್ಞಾನವನ್ನು ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ಯುವುದು ಸರ್ಕಾರದ ನೀತಿಯಾಗಿದೆ. ಇಲ್ಲದಿದ್ದಲ್ಲಿ ಹಳ್ಳಿಗಳು ಅಭಿವೃದ್ಧಿಯಿಂದ ವಂಚಿತವಾಗುತ್ತವೆ ಎಂದು ಮುಖ್ಯಮಂತ್ರಿ ಹೇಳಿದರು.
ಕೃಷಿ ಕ್ಷೇತ್ರದಲ್ಲೂ ವಿಜ್ಞಾನ ಅಳವಡಿಸಿಕೊಳ್ಳಬೇಕು. ಆಗಷ್ಟೆ ಭಾರತ ಅಗ್ರಮಾನ್ಯ ದೇಶವಾಗಿ ರೂಪುಗೊಳ್ಳಲು ಸಾಧ್ಯ. ಎಂದು ಕೃಷ್ಣ ಅಭಿಪ್ರಾಯಪಟ್ಟರು.
ಸನ್ಮಾನ : ಗ್ರಾಮೀಣ ಪ್ರದೇಶದಲ್ಲಿ ತಂತ್ರಜ್ಞಾನ ಕ್ರಾಂತಿ ಮಾಡುತ್ತಿರುವ, ತೂಗುಸೇತುವೆ ಖ್ಯಾತಿಯ ಗಿರೀಶ್ ಭಾರದ್ವಾಜ್ ಹಾಗೂ ಕಡಿಮೆ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ತಂತ್ರಜ್ಞಾನ ಪ್ರಚುರ ಪಡಿಸುತ್ತಿರುವ ಮಾಸ್ಟರ್ ಪ್ಲಾನರಿಯ ಅವರನ್ನು ಇದೇ ಸಂದರ್ಭದಲ್ಲಿ ಅನುಕ್ರಮವಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಪರಮೇಶ್ವರ್ ಸನ್ಮಾನಿಸಿದರು.
ಸಚಿವರಾದ ಎಂ.ಎಂ.ನಾಣಯ್ಯ, ಬಿ.ಬಿ.ಚಿಮ್ಮನಕಟ್ಟಿ , ಟಿ.ಜಾನ್, ಶಾಸಕರಾದ ವಿನಯಚಂದ್ರ ಮತ್ತು ಇಬ್ರಾಹಿಂ ಹಾಗೂ ತಾಂತ್ರಿಕ ಶಿಕ್ಷಣ ನಿರ್ದೇಶಕ ಬಲವೀರ ರೆಡ್ಡಿ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಆನಂತರ ಮುಖ್ಯಮಂತ್ರಿ ಕೃಷ್ಣ ಅವರು ಸುಳ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications