ನಮ್ಮ ನಾಡಿಗೆ ಬನ್ನಿ ! ಐಟಿ ಪರಿಣತರಿಗೆ ಮಾರಿಷಸ್ ಪ್ರಧಾನಿ ಕರೆ
ಬೆಂಗಳೂರು : ಭಾರತದ ಐಟಿ ಪರಿಣತರ ಸೇವೆಯನ್ನು ಬಳಸಿಕೊಳ್ಳಲು ಮಾರಿಷಸ್ ಉದ್ದೇಶಿಸಿದೆ, ಇಲ್ಲಿನ ಐಟಿ ತಂತ್ರಜ್ಞರಿಗೆ ನಮ್ಮ ದೇಶಕ್ಕೆ ಸ್ವಾಗತ ಎಂದು ಮಾರಿಷಸ್ ಪ್ರಧಾನಿ ಅನಿರೂದ್ ಜುಗ್ನೌತ್ ಹೇಳಿದ್ದಾರೆ.
ಎರಡು ದಿನಗಳ ಭೇಟಿಗಾಗಿ ಬುಧವಾರ ನಗರಕ್ಕೆ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಐಟಿ ಕ್ಷೇತ್ರದಲ್ಲಿ ವೃದ್ಧಿ ಹೊಂದಲು ಭಾರತದ ತಂತ್ರಜ್ಞರನ್ನು ಬಳಸಿಕೊಳ್ಳಲು ಉದ್ದೇಶಿಸಿದ್ದೇವೆ. ನಮ್ಮ ಜನ ಭಾರತೀಯ ತಂತ್ರಜ್ಞರಿಂದ ಹೆಚ್ಚಿನ ಕೌಶಲ್ಯ ಕಲಿಯಬೇಕಾಗಿದೆ ಎಂದು ಅನಿರೂದ್ ಹೇಳಿದರು. ಆದರೆ, ಮಾರಿಷಸ್ನಲ್ಲಿ ಬೇಡಿಕೆಯಿರುವ ತಂತ್ರಜ್ಞರ ಸಂಖ್ಯೆಯನ್ನು ಅವರು ಬಹಿರಂಗಪಡಿಸಲಿಲ್ಲ .
ಭಾರತದೊಂದಿಗೆ ನಿರಂತರವಾಗಿ ಉತ್ತಮ ದ್ವಿಪಕ್ಷೀಯ ಸಂಬಂಧವನ್ನು ಹೊಂದಲು ಮಾರಿಷಸ್ ಬಯಸುತ್ತದೆ. ಮಾರಿಷಸ್ನಲ್ಲಿ ಸೈಬರ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದ್ದು , ಈ ಬಗ್ಗೆ ಪ್ರಧಾನಿ ವಾಜಪೇಯಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಅನಿರೂದ್ ಹೇಳಿದರು.
ಹೃತ್ಪೂರ್ವಕ ಸ್ವಾಗತ : ಮಾರಿಷಸ್ ಪ್ರಧಾನಿಗಳನ್ನು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲೆ ರಮಾದೇವಿ, ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಇತರೆ ಉನ್ನತ ಅಧಿಕಾರಿಗಳು ಆತ್ಮೀಯ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ಗುರುವಾರ, ಬಿಇಎಲ್, ಎಚ್ಎಎಲ್ ಹಾಗೂ ಇನ್ಫೋಸಿಸ್ ಸಂಸ್ಥೆಗಳಿಗೆ ಮಾರಿಷಸ್ ಪ್ರಧಾನಿ ಭೇಟಿ ಕೊಡುವ ಕಾರ್ಯಕ್ರಮವಿದೆ.
(ಯುಎನ್ಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications