ಜಾಗತೀಕರಣ ಅರ್ಥಾತ್ ದೋಚೀಕರಣ - ದೇವನೂರು ಮಹಾದೇವ
ಹಾಸನ : ಜಾಗತೀಕರಣದ ಹೆಸರಿನಲ್ಲಿ ದೋಚೀಕರಣ ನಡೆಯುತ್ತಿದೆ ಎಂದು ಸಾಹಿತಿ ಮತ್ತು ಚಿಂತಕ ದೇವನೂರು ಮಹಾದೇವ ಆಪಾದಿಸಿದ್ದಾರೆ.
ಅವರು ಬುಧವಾರದಂದು ನಗರದ ಗಣಪತಿ ಪೆಂಡಾಲ್ನಲ್ಲಿ ಆಯೋಜಿಸಿದ್ದ ಜಾಗತೀಕರಣ ವಿರೋಧಿ ಸಮಾವೇಶದಲ್ಲಿ ಮಾತನಾಡುತ್ತಿದ್ದರು. ದೇಶಭಕ್ತರು ಎಂದು ಹೇಳಿಕೊಳ್ಳುವವರೇ ಗುಲಾಮಗಿರಿಯ ಕಡೆಗೆ ಸ್ವ ಇಚ್ಛೆಯಿಂದ ಧಾವಿಸುತ್ತಿದ್ದಾರೆ. ಈಗಲಾದರೂ ಎಚ್ಚೆತ್ತುಕೊಂಡು ಹೋರಾಟ ಮಾಡದಿದ್ದರೆ ದೇಶದ ಜನತೆ ಸದ್ಯದಲ್ಲಿಯೇ ಪಾಶ್ಚಾತ್ಯರ ಗುಲಾಮರಾಗುವುದರಲ್ಲಿ ಎರಡು ಮಾತಿಲ್ಲ ಎಂದು ದೇವನೂರು ಎಚ್ಚರಿಸಿದರು. ಗ್ಯಾಟ್ ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ದೇಶದ ಹಿತದ ಬಗ್ಗೆ ಯೋಚನೆ ಮಾಡಿದಿರುವುದರ ಫಲವೇ ಇಂದಿನ ಜಾಗತೀಕರಣ. ರಾಜಕಾರಣಿಗಳು ಕೆಲಸ ವಡುವ ಮುನ್ನ ಎಷ್ಟು ದೋಚಬಹುದು ಎಂಬುದನ್ನೇ ಆಲೋಚನೆ ಮಾಡುತ್ತಾರೆ ಎಂದು ಅವರು ದೂರಿದರು.
ಸಮಾರಂಭದ ಇನ್ನೋರ್ವ ಅತಿಥಿ ಸಾಹಿತಿ ಡಾ. ಹಿ.ಶಿ. ರಾಮಚಂದ್ರೇ ಗೌಡ ಮಾತನಾಡುತ್ತಾ, ಕಳೆದ ಐವತ್ತು ವರ್ಷಗಳಲ್ಲಿನ ಸೃಜನಾತ್ಮಕ ಕೊರತೆಯಿಂದಾಗಿಯೇ ಈ ಜಾಗತೀಕರಣದ ಆಗಮನವಾಗಿದೆ. ಅಭಿವೃದ್ಧಿ ಕಲ್ಪನೆಯ ಭಾರತವನ್ನು ನಾವು ಕಾಣಲೇ ಇಲ್ಲ. ದೇಶದಲ್ಲಿ ಈಗೀಗ ಭವಿಷ್ಯ ಕುರಿತ ಭಯವೂ ಕಾಣುತ್ತಿಲ್ಲ. ನಮ್ಮಲ್ಲಿರುವ ಸಂಪತ್ತನ್ನೂ ನಾವು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಎಸ್. ಪುಟ್ಟಣ್ಣಯ್ಯ, ಜನವಾದಿ ಮಹಿಳಾ ಸಂಘಟನೆಯ ಕೆ. ನೀಲ ಮತ್ತು ರಾಜ್ಯ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎ.ಎನ್. ಬುರ್ಜಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications