ಬೆಂಗಳೂರಲ್ಲಿ ಮೆಟ್ರೋ ಬಸ್ ಆರಂಭಕ್ಕೆ ಕೇಂದ್ರದ ತಾತ್ವಿಕ ಸಮ್ಮತಿ
ಬೆಂಗಳೂರು : ಹಾಲಿ ಬೆಂಗಳೂರಿನಲ್ಲಿರುವ ವಾಹನಗಳ ಒಟ್ಟು ಸಂಖ್ಯೆ ಎಷ್ಟು ಗೊತ್ತೆ? ಮುಂದಿನ 14 ವರ್ಷಗಳಲ್ಲಿ ಈ ವಾಹನಗಳ ಸಂಖ್ಯೆ ಎಷ್ಟಾಗುತ್ತದೆ ಎಂದು ಊಹಿಸಿದ್ದೀರಾ? ರಾಜ್ಯದ ಗೃಹ ಕಾರ್ಯದರ್ಶಿ ಎಂ.ಬಿ. ಪ್ರಕಾಶ್ ಅವರ ರೀತ್ಯ ಹಾಲಿ ಬೆಂಗಳೂರಲ್ಲಿ ಅಂದಾಜು 13.30 ವಾಹನಗಳಿವೆ (ಹೊರ ರಾಜ್ಯದ ನೋಂದಣಿ ಸಂಖ್ಯೆಯ ವಾಹನಗಳನ್ನು ಬಿಟ್ಟು), ದ್ವಿಚಕ್ರ ವಾಹನಗಳ ಸಂಖ್ಯೆಯಂತೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ 2015ನೇ ಇಸವಿ ಹೊತ್ತಿಗೆ ಬೆಂಗಳೂರಿನ ವಾಹನಗಳ ಸಂಖ್ಯೆ 22 ಲಕ್ಷಕ್ಕೆ ಏರಲಿದೆ.
ಬೆಂಗಳೂರು ನಗರ ಸಂಚಾರಿ ಪೊಲೀಸ್, ಬೆಂಗಳೂರು ಕಾರ್ಯಪಡೆ, ಸಂಚಾರ ಸಲಹಾ ಸಮಿತಿ ಸಂಯುಕ್ತಾಶ್ರಯದಲ್ಲಿ ಬುಧವಾರ ಜರುಗಿದ ಸುಗಮ ಸಂಚಾರ ವ್ಯವಸ್ಥೆಗೆ ತುರ್ತು ಯೋಜನೆಗಳು ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದ ಪ್ರಕಾಶ್ ಈ ವಿಷಯ ತಿಳಿಸಿದ್ದಾರೆ.
ಮೆಟ್ರೋ ಬಸ್ : ಬೆಂಗಳೂರಲ್ಲಿ ಮೆಟ್ರೋ ಬಸ್ಗಳ ಆರಂಭಕ್ಕೆ ಕೇಂದ್ರ ಸರಕಾರದ ತಾತ್ವಿಕ ಒಪ್ಪಿಗೆ ದೊರಕಿದೆ. ನಗರದಲ್ಲಿ ಹಾಲಿ 1500 ಬಸ್ಗಳು ಸಂಚರಿಸುತ್ತಿವೆ ಆದರೂ, ಸಂಚಾರ ಸಮಸ್ಯೆ - ಒತ್ತಡ ಹೆಚ್ಚುತ್ತಲೇ ಇದೆ. ಮೆಟ್ರೋ ಬಸ್ಗಳ ಸಂಚಾರದಿಂದ ಕನಿಷ್ಠ 200 ಬಸ್ಗಳ ಒತ್ತಡವನ್ನು ಕಡಿಮೆ ಮಾಡಬಹುದಾಗಿದೆ ಎಂದೂ ಅವರು ಹೇಳಿದರು.
ಸಂಚಾರ ನಿಯಮ ಉಲ್ಲಂಘಿಸಿದ ಚಾಲಕರಿಂದ ವಸೂಲಿ ಮಾಡುವ ದಂಡದ ಹಣವನ್ನು ರಸ್ತೆ ಹಾಗೂ ಸಂಚಾರ ವ್ಯವಸ್ಥೆ ಅಭಿವೃದ್ಧಿಗೆ ಬಳಸಲು ಸರಕಾರ ಆದೇಶ ಹೊರಡಿಸಿದೆ. ಮಹಾನಗರ ಪಾಲಿಕೆ ಜಂಟಿ ಆಯುಕ್ತ ಆಶೋಕ್ ದಳವಾಯಿ ಅವರ ನೇತೃತ್ವದಲ್ಲಿ ರಚಿಸಲಾಗಿರುವ ಸಮತಿ ಸಂಚಾರ ವ್ಯವಸ್ಥೆಯ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳೇನು ಎಂಬ ಬಗ್ಗೆ ಮುಂದಿನ ತಿಂಗಳು ತನ್ನ ವರದಿ ಸಲ್ಲಿಸಲಿದೆ. ಇದನ್ನು ಪರಿಶೀಲಿಸಿ ಸರಕಾರ ಅನುಷ್ಠಾನ ಮಾಡಲಿದೆ ಎಂದರು.
ಏಕಮುಖ ಸಂಚಾರ : ಸಮಾರೋಪ ಸಮಾರಂಭಕ್ಕೂ ಮುನ್ನ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಾಪೌರರಾದ ಪ್ರೇಮಾ ಕಾರ್ಯಪ್ಪ ಅವರು, ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಹಾಗೂ ಕೇಂದ್ರ ಭಾಗದಲ್ಲಿ ಏಕ ಮುಖ ಸಂಚಾರ ವ್ಯವಸ್ಥೆ ಜಾರಿಗೆ ತರುವುದರಿಂದ ಸಂಚಾರದ ಒತ್ತಡ ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.
ಪ್ರತಿವರ್ಷ 600 ಸಾವು : ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ಪ್ರತಿವರ್ಷ ಕನಿಷ್ಠ 600 ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ಸಾವಿನ ಸಂಖ್ಯೆ ಜಂಕ್ಷನ್ಗಳಲ್ಲಿಯೇ ಹೆಚ್ಚು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಶಂತನು ಕೌನ್ಸಲ್, ಪೊಲೀಸ್ ಆಯುಕ್ತ ಮಡಿಯಾಳ್, ತುರ್ತು ಯೋಜನೆ ನಿರ್ದೇಶಕ ಶ್ರೀನಿವಾಸ್, ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಮೊದಲಾದವರು ಪಾಲ್ಗೊಂಡಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications