ಕೇಂದ್ರದಿಂದಲೇ ಕೃಷ್ಣಾ ನದಿ ಸಮಸ್ಯೆಗೆ ಪರಿಹಾರ- ಬೆಂಗಳೂರಲ್ಲಿ ಪ್ರಧಾನಿ
ಬೆಂಗಳೂರು : ಇದೀಗ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಭಾರತದ ಸಿಲಿಕಾನ್ ವ್ಯಾಲಿಯಲ್ಲಿದ್ದಾರೆ. ಉಡುಪಿಯಲ್ಲಿ ರಾಜಾಂಗಣ ಉದ್ಘಾಟನೆ ನೆರವೇರಿಸಿ, ಕೃಷ್ಣ ದರ್ಶನ ಪಡೆದು ಶುಕ್ರವಾರ ಬೆಳಿಗ್ಗೆ ಮಂಗಳೂರಿನಲ್ಲಿ ಬೆಂಗಳೂರು ವಿಮಾನ ಹತ್ತಿದ ಪ್ರಧಾನಿ ಶುರು ಮಧ್ಯಾಹ್ನದ ಬಿಸಿಲು ಹೊತ್ತಿಗೆ ಬೆಂಗಳೂರು ಮುಟ್ಟಿದರು.
ವಿಮಾನ ಇಳಿದ ತಕ್ಷಣ ಮುತ್ತಿಕೊಂಡ ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸುವ ಮೂಡಿನಲ್ಲಿರಲಿಲ್ಲ . ಕೃಷ್ಣಾ ನದಿ ಸಮಸ್ಯೆಯನ್ನು ಕೇಂದ್ರಸರ್ಕಾರವೇ ಬಗೆಹರಿಸುತ್ತದೆ ಎಂದ ಅವರು, ಧರ್ಮ ಸಂಸತ್ತಿನ ಬಗ್ಗೆ ಇಲ್ಲಿ ಏನನ್ನೂ ಹೇಳಲಾರೆ ಎಂದರು. ಉಳಿದಂತೆ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೆ- ದಿನಪೂರ್ತಿ ಬೆಂಗಳೂರಿನಲ್ಲಿಯೇ ಇರುತ್ತೇನೆ. ಮಾತನಾಡಲು ಅನೇಕ ಅವಕಾಶಗಳಿವೆ. ಆಗ ಎಲ್ಲವನ್ನೂ ಹೇಳುತ್ತೇನೆ ಎಂದು ಒಂದಾನೊಂದು ಕಾಲದಲ್ಲಿ ಪತ್ರಕರ್ತರೂ ಆಗಿದ್ದ ಪ್ರಧಾನಿ ಸುದ್ದಿಗಾರರನ್ನು ಸಾಗಹಾಕಿದರು.
ಶುಕ್ರವಾರದ ಪ್ರಧಾನಿಗಳ ಕಾರ್ಯಕ್ರಮದಲ್ಲಿ - ಕುಂಬಳಗೋಡಿನಲ್ಲಿ ಆದಿ ಚುಂಚನಗಿರಿ ಸಂಸ್ಥಾನ ನಿರ್ಮಿಸಿರುವ ಅಂತರರಾಷ್ಟ್ರೀಯ ವಸತಿ ಶಾಲೆಯ ಉದ್ಘಾಟನೆ, ಸಿಲಕಾನ್ ವ್ಯಾಲಿಯ ಗುಮ್ಮಟ ಇನ್ಫೋಸಿಸ್ ಭೇಟಿ, ವೈಟ್ಫೀಲ್ಡ್ನಲ್ಲಿ ನಿರ್ಮಿಸಲಾಗಿರುವ ಸತ್ಯಸಾಯಿ ಉನ್ನತ ವೈದ್ಯಕೀಯ ವಿಜ್ಞಾನಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಚಾಲನೆ ಹಾಗೂ ಕೊನೆಯದಾಗಿ ಸಂಜೆ 05.05 ಕ್ಕೆ ವಿಧಾನಸೌಧದಲ್ಲಿ ರಿಮೋಟ್ ಒತ್ತುವ ಮೂಲಕ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿಗೆ ಸಾಂಕೇತಿಕ ಹಸಿರು ನಿಶಾನೆ ಸೇರಿವೆ.
ವಿಧಾನಸೌಧದಲ್ಲಿನ ಎಲ್ಲಾ ಕಚೇರಿಗಳಿಗೆ ರಜೆ : ಪ್ರಧಾನಿಗಳು ವಿಧಾನಸೌಧಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿನ ಅಂಚೆ, ಬ್ಯಾಂಕ್ ಸೇರಿದಂತೆ ಎಲ್ಲಾ ಕಚೇರಿಗಳನ್ನು ಶುಕ್ರವಾರದ ಮಟ್ಟಿಗೆ ಮುಚ್ಚಲಾಗಿದೆ. ಸೌಧಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದ್ದು , ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಕಲ್ಪಿಸಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications