ಅನಿವಾಸಿ ಭಾರತೀಯ ಮಕ್ಕಳ ವಸತಿ ಶಾಲೆಗೆ ಹಸಿರು ನಿಶಾನೆ
ಕುಂಬಳಗೋಡು : ಅನಿವಾಸಿ ಭಾರತೀಯ ಮಕ್ಕಳಿಗಾಗಿ 25 ಕೋಟಿ ರುಪಾಯಿ ವೆಚ್ಚದಲ್ಲಿ ಆದಿಚುಂಚನಗಿರಿ ಸಂಸ್ಥಾನ ನಿರ್ಮಿಸಿರುವ ಅಂತರರಾಷ್ಟ್ರೀಯ ವಸತಿಶಾಲೆಗೆ ಪ್ರಧಾನಿ ವಾಜಪೇಯಿ ಶುಕ್ರವಾರ ಹಸಿರು ನಿಶಾನೆ ತೋರಿದರು.
ವಿದ್ಯಾಸೌಧವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಸಂಸ್ಥಾನದ ಶೈಕ್ಷಣಿಕ ಚಟುವಟಿಕೆಗಳನ್ನು ಶ್ಲಾಘಿಸಿದರು. ಆದಿಚುಂಚನಗಿರಿಯನ್ನು ವಿದ್ಯಾಗಿರಿ ಎಂದು ಬಣ್ಣಿಸಿದ ಅವರು, ನಂತರದ ದಿನಗಳಲ್ಲಿ ಇದು ವಿಕಾಸಗಿರಿಯಾಗಲಿ ಎಂದು ಹಾರೈಸಿದರು. ಪ್ರಾಥಮಿಕ ಶಿಕ್ಷಣ ಯಜ್ಞದಲ್ಲಿ ತೊಡಗಿರುವ ಬಾಲ ಗಂಗಾಧರನಾಥ ಶ್ರೀಗಳ ಸೇವೆ ದೊಡ್ಡದು ಎಂದು ವಾಜಪೇಯಿ ಹೇಳಿದರು. ಇದೇ ಸಂದರ್ಭದಲ್ಲಿ 53 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಸ್ವಾಮೀಜಿಯವರಿಗೆ ಶಾಲು ಹೊದೆಸಿ ಪ್ರಧಾನಿ ಅಭಿನಂದಿಸಿದರು.
ವಿಧಾನಸೌಧ ಮಾದರಿಯ ವಿದ್ಯಾಸೌಧ : ಅಂತರರಾಷ್ಟ್ರೀಯ ಗುಣಮಟ್ಟವನ್ನು ಹೊಂದಿರುವ 150 ಎಕರೆ ವ್ಯಾಪ್ತಿಯ ವಿದ್ಯಾಸೌಧ - ಆಟದ ಮೈದಾನ, ಈಜುಕೊಳ, ಒಲಂಪಿಕ್ ಮಟ್ಟದ ಸಭಾಂಗಣವನ್ನು ಹೊಂದಿದೆ. ಬ್ರಿಟಿಷ್ ಗ್ರಂಥಾಲಯ, ಇಂಡಿಯನ್ ನ್ಯಾಶನಲ್ ಕಾರ್ಟೊಗ್ರಾಫಿಕ್ಸ್ , ಸ್ಕೂಲ್ನೆಟ್, ಜಾಗೃತಿ, ಬಯಾನ್ಸ್ ಮುಂತಾದ ಸಂಸ್ಥೆಗಳ ಸಂಪರ್ಕದೊಂದಿಗೆ ಈ ಶಾಲೆಯನ್ನು ನಿರ್ಮಿಸಲಾಗಿದೆ.
1997 ರಿಂದಲೇ ಕೆಲಸ ನಿರ್ವಹಿಸುತ್ತಿರುವ ಶಾಲೆ- ಅಮೆರಿಕ, ಸಿಂಗಪುರ, ಇಂಡೋನೇಷ್ಯಾ, ಬ್ರಿಟನ್, ಜರ್ಮನಿ ಮುಂತಾದ ದೇಶಗಳ ವಿದ್ಯಾರ್ಥಿಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳನ್ನು ಕುದುರೆ ಸವಾರಿ ಸೇರಿದಂತೆ ವಿವಿಧ ವಿದ್ಯೆಗಳಲ್ಲಿ ಶಾಲೆ ಪಳಗಿಸುತ್ತಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications