ದೇಶದ ಅಖಂಡತೆಗೆ ಸನಾತನ ಸಂಸ್ಕೃತಿಯೇ ಕಾರಣ - ಪ್ರಧಾನಿ ವಾಜಪೇಯಿ
ಉಡುಪಿ : ಸನಾತನ ಸಂಸ್ಕೃತಿಯನ್ನು ಉಳಿಸಿಕೊಂಡು ದೇಶ ಮುನ್ನಡೆಯುತ್ತಿರುವುದರಿಂದ ದೇಶದ ಅಖಂಡತೆ ಉಳಿದುಕೊಂಡು ಬಂದಿದೆ ಎಂದು ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದಾರೆ.
ಗುರುವಾರ ರಾತ್ರಿ ಕೃಷ್ಣ ದೇವಸ್ಥಾನದ ಬಳಿಯ ರಾಜಾಂಗಣ ಸಭಾಗೃಹವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜಾತಿ ಬದಲಾದರೂ ಸಂಸ್ಕೃತಿ ಬದಲಾಗುವುದಿಲ್ಲ ಎಂಬುದಕ್ಕೆ ಇಂಡೋನೇಷ್ಯದಲ್ಲಿರುವ ರಾಮ ಮತ್ತು ಹನುಮಂತರ ದೇವಾಲಯಗಳೇ ಸಾಕ್ಷಿ. ಅಲ್ಲಿನವರು ಈಗಲೂ ರಾಮ ಮತ್ತು ಹನುಮಂತರನ್ನು ತಮ್ಮ ಪೂರ್ವಜರೆಂದು ಪೂಜಿಸುತ್ತಾರೆ ಎಂದರು. ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ ಉಡುಪಿಯಲ್ಲಿ ಹಿಂದೆಯೇ ಆಂದೋಲನ ನಡೆದಿತ್ತು. ಕನಕನ ಭಕ್ತಿ ಅದಕ್ಕೊಂದು ಉತ್ತಮ ನಿದರ್ಶನ ಎಂದ ವಾಜಪೇಯಿ ಸ್ವರಾಜ್ಯ, ಸ್ವಾಭಿಮಾನ, ಸ್ವಾವಲಂಬಿ ದೇಶ ಕಟ್ಟುವ ಸಂಕಲ್ಪ ಮಾಡಲಾಗಿದೆ ಎಂದು ಹೇಳಿದರು.
ಕೃಷ್ಣ ದರ್ಶನ : ಗುರುವಾರದಂದು ವಿಶೇಷ ಹೆಲಿಕಾಪ್ಟರ್ನಲ್ಲಿ ಮಂಗಳೂರಿಗೆ ಬಂದಿಳಿದ ನಂತರ ಉಡುಪಿ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ದರ್ಶನ ಪಡೆದರು. ಹಣತೆ ಬೆಳಕಿನಲ್ಲಿ ಹೊಳೆಯುತ್ತಿದ್ದ ವಜ್ರ ಕಿರೀಟಧಾರಿ ಕೃಷ್ಣ ದೇವರನ್ನು ನವಗ್ರಹ ಕನಕನ ಕಿಂಡಿಯಲ್ಲಿ ಇಣುಕಿ ನೋಡಿ ನಮಸ್ಕರಿಸಿದರು. ದೇವಸ್ಥಾನದ ಬಳಿ ನಿರ್ಮಿಸಲಾಗಿರುವ ರಾಜಾಂಗಣ ವನ್ನು ಉದ್ಘಾಟಿಸಿದ ಪ್ರಧಾನಿಗಳನ್ನು ಪೇಜಾವರ ಶ್ರೀಗಳು ಶಾಲು ಹೊದಿಸಿ, ಸನ್ಮಾನ ಪತ್ರ, ಫಲಕ ಮತ್ತು ಬಾಲಕೃಷ್ಣನ ಚಿನ್ನದ ವಿಗ್ರಹವನ್ನು ನೀಡಿ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ಪರ್ಯಾಯ ಸ್ವಾಗತ ಸಮಿತಿಯ ಉಪಾಧ್ಯಕ್ಷ ವಿನಯ ಹೆಗ್ಡೆ ಸನ್ಮಾನ ಪತ್ರವನ್ನು ವಾಚಿಸಿದರು.
ಕಾರ ಕ್ರಮದಲ್ಲಿ ರಾಜ್ಯಪಾಲೆ ವಿ.ಎಸ್. ರಮಾದೇವಿ, ಮುಖ್ಯಮಂತ್ರಿ ಎಸ್. ಎಂ. ಕೃಷ್ಣ , ಕೇಂದ್ರ ಸಚಿವರಾದ ಅನಂತ ಕುಮಾರ್, ಧನಂಜಯ ಕುಮಾರ್, ಡಾ. ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಹಾಗೂ ಸಂಸದ ವಿನಯ ಕುಮಾರ್ ಸೊರಕೆ ಉಪಸ್ಥಿತರಿದ್ದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಕರ್ನಾಟಕದಲ್ಲಿ ವಾಜಪೇಯಿ / ವಾಜಪೇಯಿ ಚಿತ್ರಪಟ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications