ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹೊಸದೊಂದು ಆಯೋಗ
ನವದೆಹಲಿ : ಮಕ್ಕಳ ಹಕ್ಕನ್ನು ಪರಾಮರ್ಶಿಸುವ ಮತ್ತು ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಸರಕಾರವು ರಾಷ್ಟ್ರೀಯ ಮಕ್ಕಳ ಆಯೋಗವೊಂದನ್ನು ರಚಿಸುವ ಉದ್ದೇಶ ಹೊಂದಿದೆ.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಗೊಳಿಸುವ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಮಾವೇಶದ ಉದ್ಘಾಟನಾ ಭಾಷಣದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಮುರಳಿ ಮನೋಹರ ಜೋಶಿ ಈ ವಿಷಯ ತಿಳಿಸಿದರು. ಆರೋಗ್ಯ, ಪೋಷಕಾಂಶ ಹಾಗೂ ಸಾಮಾಜಿಕ ಕ್ಷೇತ್ರಗಳ ಪ್ರತಿನಿಧಿಗಳು ಈ ಆಯೋಗದಲ್ಲಿರುತ್ತಾರೆ.
ಸಾಕ್ಷರತೆಗೂ ಬಾಲ ಕಾರ್ಮಿಕ ಪದ್ಧತಿಗೂ ಹತ್ತಿರದ ಸಂಬಂಧವಿರುವುದರಿಂದ ಮಾನವ ಸಂಪನ್ಮೂಲ ಇಲಾಖೆಯು ಈ ವಿಷಯವನ್ನು ಕೈಗೆತ್ತಿಕೊಂಡಿದೆ. ದೇಶದ ಯಾವ ಮಗುವೂ ಸಾಕ್ಷರತೆ ಮತ್ತು ಆರೋಗ್ಯಗದಿಂದ ವಂಚಿತನಾಗಬಾರದು ಎಂಬುದೇ ಉದ್ದೇಶಿತ ಆಯೋಗದ ಮುಂದಿನ ಗುರಿ ಎಂದು ಜೋಶಿ ಹೇಳಿದರು.
ಉದ್ಘಾಟನಾ ಭಾಷಣದಲ್ಲಿ ಕಾರ್ಮಿಕ ಸಚಿವ ಸತ್ಯನಾರಾಯಣ ಜೇಟಿಯಾ ಬಾಲ ಕಾರ್ಮಿಕತೆಯ ನಿರ್ಮೂಲನೆಗಾಗಿ ನಡೆಯುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ವಿವರ ನೀಡುತ್ತಾ, ಸರಕಾರವೊಂದರಿಂದಲೇ ಎಲ್ಲಾ ಬಾಲ ಕಾರ್ಮಿಕರಿಗೂ ಕೆಲಸ ಕೊಡುವುದು ಸಾಧ್ಯವಾಗುವುದಿಲ್ಲ. ಇತರ ಸಂಘ ಸಂಸ್ಥೆಗಳೂ ಸಹಕರಿಸಬೇಕು ಎಂದು ಹೇಳಿದರು. ವಿದೇಶೀ ಸಂಘ ಸಂಸ್ಥೆಗಳ ದೇಣಿಗೆಯಿಂದ ನಮ್ಮ ದೇಶದಲ್ಲಿರುವ ಬಾಲ ಕಾರ್ಮಿಕತೆಯನ್ನು ನಿರ್ಮೂಲನೆ ಮಾಡಲಾಗುವುದಿಲ್ಲ. ಬದಲಾಗಿ ದೇಶೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳಿಗೆ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದ ಜೋಶಿ, ನಮ್ಮಲ್ಲಿ ಸರಿಯಾದ ಅಂಕಿ ಅಂಶಗಳನ್ನು ಸಂಗ್ರಹಿಸುವ ಪರಿಪಾಠವಿಲ್ಲ. ಈಗ ತಯಾರಿಸುವ ಯೋಜನೆಗಳೆಲ್ಲವೂ 1991ರ ಜನಗಣತಿಯ ಆಧಾರದ ಮೇಲೇ ಮುಂದುವರೆಯುತ್ತಿದೆ, ಇದೂ ನಾವು ಹಿಂದುಳಿಯುವುದಕ್ಕೆ ಕಾರಣವಾಗುತ್ತದೆ ಎಂದರು.
ಡಾ. ಜೇಟಿಯಾ ಅವರು ಮಾತನಾಡಿ, 1.32 ಕೋಟಿ ಮಕ್ಕಳು 13 ರಾಜ್ಯಗಳಲ್ಲಿ ದುಡಿಯುತ್ತಿರುವುದಾಗಿ ವರದಿಯಾಗಿದೆ. ಆದರೆ ಕೇವಲ ಎರಡು ಲಕ್ಷ ಮಕ್ಕಳಿಗೆ ಮಾತ್ರ ಹೊಸ ಬದುಕು ಕಲ್ಪಿಸುವುದು ಸಾಧ್ಯವಾಗಿದೆ ಎಂದು ಹೇಳಿದರು.
ಸಮಾವೇಶದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕ ಸಚಿವರು ಮತ್ತು ಕಾರ್ಮಿಕ ಕಾರ್ಯದರ್ಶಿಗಳು ಮತ್ತು ಕಾರ್ಮಿಕ ಯೋಜನೆಗಳ ಅಧ್ಯಕ್ಷರು ಭಾಗವಹಿಸುತ್ತಾರೆ. ಸಮಾವೇಶವು ಬಾಲ ಕಾರ್ಮಿಕ ಪದ್ಧತಿಯ ನಿರ್ಮೂನೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ರೂಪು ರೇಶೆಯನ್ನು ಸಿದ್ಧ ಪಡಿಸಲಿದ್ದು, ಸಮಾರೋಪದಲ್ಲಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಭಾಗವಹಿಸಲಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications