ಉನ್ನತ ಶಿಕ್ಷಣದವರೆಗೂ ಕನ್ನಡ ಬೋಧನಾ ಮಾಧ್ಯಮವಾಗಿಲಿ - ಬರಗೂರು
ಬೆಂಗಳೂರು : ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದ ವರೆಗೆ ಕನ್ನಡ ಭಾಷೆಯನ್ನೇ ಬೋಧನಾ ಮಾಧ್ಯಮವನ್ನಾಗಿ ಜಾರಿಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸರಕಾರವನ್ನು ಆಗ್ರಹಿಸಿದೆ.
ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಈ ಕುರಿತ ವರದಿಯಾಂದನ್ನು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರಿಗೆ ಮಂಗಳವಾರ ಸಲ್ಲಿಸಿ- ಅಂಗನವಾಡಿ, ಕಿಂಡರ್ಗಾರ್ಡನ್ ಮತ್ತು ನರ್ಸರಿ ಶಾಲೆಗಳೂ ಸೇರಿದಂತೆ ಎಲ್ಲೆಡೆಯೂ ಕನ್ನಡ ಭಾಷೆಯನ್ನೇ ಬೋಧನಾ ಮಾಧ್ಯಮವನ್ನಾಗಿ ಜಾರಿಗೆ ತರಲು ರೂಪು ರೇಷೆಗಳನ್ನು ಸಿದ್ಧಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು. ಮುಖ್ಯಮಂತ್ರಿಗಳ ಭೇಟಿಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕನ್ನಡೇತರ ಶಾಲೆಗಳಲ್ಲಿಯೂ ಕನ್ನಡ ಕಲಿಕೆ ಕಡ್ಡಾಯವಾಗಿರಬೇಕು ಎಂದ ಬರಗೂರು, 1985ರ ಹೈಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಅಂತಹ ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಸರಕಾರವನ್ನು ಆಗ್ರಹಿಸಿದರು. ಉನ್ನತ ಶಿಕ್ಷಣ ವಲಯದಲ್ಲಿ ಹಾಗೂ ಎಲ್ಲ ಪದವಿ ತರಗತಿಗಳಲ್ಲಿ (ಕೈಗಾರಿಕಾ ತರಬೇತಿ ಕೇಂದ್ರಗಳು, ಬಿಎಡ್, ಟಿಸಿಎಚ್, ಕಾನೂನು) ಕನ್ನಡ ಕಲಿಕೆ ಕಡ್ಡಾಯವಾಗಬೇಕು ಮತ್ತು ಕೃಷಿ ವಿಶ್ವ ವಿದ್ಯಾಲಯ, ಇಂಜಿನಿಯರಿಂಗ್, ಮೆಡಿಕಲ್ ಶಿಕ್ಷಣ ತರಗತಿಗಳ ಮೊದಲೆರಡು ಸೆಮಿಸ್ಟರ್ಗಳಲ್ಲಿಯೂ ಕನ್ನಡ ಭಾಷಾ ಪಾಠ ಇರಬೇಕು.
ಕಂಪ್ಯೂಟರ್ ಕೋರ್ಸುಗಳಲ್ಲಿಯೂ ಕನ್ನಡ ಪಾಠವಿದ್ದು, ಕನ್ನಡ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣ ಪ್ರವೇಶದಲ್ಲಿ ಪ್ರಾಶಸ್ತ್ಯ ನೀಡಬೇಕು. ಗಡಿ ಪ್ರದೇಶದ ಕನ್ನಡಿಗರ ಸಮಸ್ಯೆ ಪರಿಹರಿಸಲು ಸರಕಾರ ಮುಂದಾಗಬೇಕು ಎಂದು ಹೇಳಿದ ಬರಗೂರು, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಭೆ ಕರೆಯುವಂತೆ ಕೃಷ್ಣ ಅವರನ್ನು ಕೋರಲಾಗಿದೆ ಎಂದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications