ಭೀಮಾನದಿಗೆ ನೀರು ಬಿಡಲು ಮಹಾರಾಷ್ಟ್ರದ ತಾತ್ವಿಕ ಒಪ್ಪಿಗೆ
ಮುಂಬಯಿ : ಗುಲ್ಬರ್ಗಾ, ಬಿಜಾಪುರ ಜಿಲ್ಲೆಯ ಜನತೆ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಉಜ್ಜಯನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಸರಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಈ ಸಂಬಂಧ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನೇತೃತ್ವದಲ್ಲಿ ಮುಂಬಯಿಗೆ ತೆರಳಿರುವ ನಿಯೋಗವು ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್ರಾವ್ ದೇಶ್ಮುಖ್ ಅವರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದೆ.
ಕಳೆದ ನವೆಂಬರ್ನಿಂದಲೇ ಭೀಮಾನದಿ ಒಣಗಿದ್ದು, ಬಿಜಾಪುರ ಜಿಲ್ಲೆಯ ಸಿಂಧಗಿ, ಇಂಡಿ ತಾಲೂಕುಗಳಲ್ಲಿ ಜನ ಹಾಗೂ ಜಾನುವಾರುಗಳು ನೀರಿಗಾಗಿ ಪಡುತ್ತಿರುವ ಪಾಡನ್ನು ವಿಲಾಸ್ರಾವ್ ದೇಶಮುಖ್ ಅವರ ಗಮನಕ್ಕೆ ತರಲಾಗಿದ್ದು, ಅವರು ಮಾನವೀಯತೆಯ ದೃಷ್ಟಿಯಿಂದ ಭೀಮಾನದಿಗೆ ಉಜ್ಜಯಿನಿ ಜಲಾಶಯದಿಂದ ನೀರು ಬಿಡಲು ತಾತ್ವಿಕವಾಗಿ ಸಮ್ಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಜೆ ಕಾರ್ಯದರ್ಶಿಗಳ ಸಭೆ: ದೇಶ್ಮುಖ್ ಅವರಿಂದ ಭೀಮಾನದಿಗೆ ನೀರು ಬಿಡಲು ತಾತ್ವಿಕ ಒಪ್ಪಿಗೆ ದೊರಕಿದೆಯಾದರೂ, ಬುಧವಾರ ಸಂಜೆ ಎರಡೂ ರಾಜ್ಯಗಳ ನಿರಾವರಿ ಇಲಾಖೆ ಕಾರ್ಯದರ್ಶಿಗಳ ಸಭೆ ನಡೆಯಲಿದೆ. ಈ ಸಭೆಯ ನಂತರ ಯಾವಾಗ ಎಷ್ಟು ನೀರು ಬಿಡಬೇಕು ಎಂಬುದು ತೀರ್ಮಾನವಾಗಲಿದೆ ಎಂದೂ ಮೂಲಗಳು ತಿಳಿಸಿವೆ.
ಬಿಜಾಪುರ, ಗುಲ್ಬರ್ಗಾ ಜಿಲ್ಲೆಗಳ ಜನರು ಹಾಗೂ ಉದ್ದಿಮೆಗಳು ಭೀಮಾನದಿಯನ್ನೇ ಅವಲಂಬಿಸಿದ್ದು, ನದಿ ಒಣಗಿ ಹೋಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೂ ಈ ಎರಡು ಜಿಲ್ಲೆಗಳಲ್ಲಿ ಬರ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ಲೋಕೋಪಯೋಗಿ ಸಚಿವ ಧರ್ಮಸಿಂಗ್, ಕಾಶಪ್ಪನವರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಶಾಸಕರುಗಳಾದ ಪಿ.ಜಿ.ಆರ್. ಸಿಂಧ್ಯಾ, ಡಾ. ಎಂ.ಆರ್. ತಂಗಾ ಮೊದಲಾದವರನ್ನೊಳಗೊಂಡ ನಿಯೋಗ ಮಂಗಳವಾರ ಮುಂಬೈಗೆ ತೆರಳಿತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications