ಮಂಗಳೂರು ವಿವಿಯಲ್ಲಿ ರೇಡಿಯೋ ಐಸೋಟೋಪ್ ಆನ್ವಯಿಕ ಕೇಂದ್ರ
ಮಂಗಳೂರು : ಮುಂಬಯಿಯ ಭಾಭಾ ಅಟೋಮಿಕ್ ಅಧ್ಯಯನ ಕೇಂದ್ರದ ಆನ್ವಯಿಕ ಐಸೋಟೋಪ್ ವಿಭಾಗದ ಸಹಯೋಗದೊಂದಿಗೆ ರೇಡಿಯೋ ಐಸೋಟೋಪ್ ಆಪ್ಲಿಕೇಷನ್ ಸೆಂಟರ್ ತೆರೆಯಲು ಮಂಗಳೂರು ವಿಶ್ವ ವಿದ್ಯಾಲಯ ಉದ್ದೇಶಿಸಿದೆ.
ಈ ಹಿನ್ನೆಲೆಯಲ್ಲಿ ಒಂದು ದಿನದ ವಿಚಾರ ಸಂಕಿರಣವೊಂದನ್ನು ಜನವರಿ 25ರಂದು ಮಂಗಳಗಂಗೋತ್ರಿಯಲ್ಲಿ ಆಯೋಜಿಸಲಾಗಿದ್ದು, ಭಾಭಾ ಅಣುಶಕ್ತಿ ಅಧ್ಯಯನ ಕೇಂದ್ರದ ಡಾ. ಎನ್. ರಾಮಮೂರ್ತಿ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ರೇಡಿಯೋ ಐಸೋಟೋಪ್ ಅಧ್ಯಯನ ಕೇಂದ್ರವನ್ನು ತೆರೆಯುವ ಮುಖ್ಯ ಉದ್ದೇಶ ಕೈಗಾರಿಕೆಗಳಲ್ಲಿ ರೇಡಿಯೋ ಐಸೋಟೋಪ್ ತಂತ್ರಜ್ಞಾನ ಬಳಕೆಯ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು ಎಂದು ವಿಶ್ವ ವಿದ್ಯಾಲಯದ ಸೈನ್ಸ್ ಆ್ಯಂಡ್ ಇನ್ಸ್ಟ್ರುಮೆಂಟೇಷನ್ ಕೇಂದ್ರದ ಡಾ. ಎಚ್. ಎಂ. ಸೋಮಶೇಖರಪ್ಪ ಮಂಗಳವಾರ ನೀಡಿರುವ ಸುದ್ದಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಆರಂಭಕ್ಕೆ ಮುಂಚೆ ಸೆಮಿನಾರನ್ನು ಆಯೋಜಿಸುವ ಮೂಲಕ ರಾಷ್ಟ್ರೀಯ ಪ್ರಯೋಗಶಾಲೆಗಳು ಮತ್ತು ವಿಶ್ವ ವಿದ್ಯಾಲಯಗಳಿಗೆ ರೇಡಿಯೋ ಐಸೋಟೋಪ್ ಬಗೆಗೆ ಮಾಹಿತಿ ನೀಡಲಾಗುವುದು.
ಈ ತಂತ್ರಜ್ಞಾನ ಅಳವಡಿಕೆಯಿಂದ ಹೆಚ್ಚು ಉಪಯೋಗವಾಗುವುದು- ಎಣ್ಣೆ, ಪೆಟ್ರೋಲಿಯಂ, ರಾಸಾಯನಿಕಗಳು, ಪೆಟ್ರೋ ಕೆಮಿಕಲ್, ರಸಗೊಬ್ಬರಗಳು, ಸಿಮೆಂಟ್ ಮತ್ತು ಸ್ಟೀಲ್ ಕೈಗಾರಿಕೆಗಳಿಗೆ. ಮಣ್ಣಿನಡಿ ಹುಗಿದಿರುವ ಪೈಪ್ ಲೈನ್ಗಳಲ್ಲಿನ ಬಿರುಕು, ವೆಲ್ಡಿಂಗ್ನಲ್ಲಿ ಉಂಟಾಗಿರುವ ಹಾನಿಗಳು, ಸ್ಟೀಲ್ ಪಾತ್ರೆಗಳ ರಚನೆಗಳಲ್ಲಿ ರೇಡಿಯೋ ಐಸೋಟೋಪ್ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸಬಲ್ಲುದು. ಈ ಎಲ್ಲ ವಿಷಯಗಳನ್ನು ಗಮನಿಸಿಕೊಂಡು ಭಾಭಾ ಅಣುಶಕ್ತಿ ಕೇಂದ್ರ ಐಸೋಟೋಪ್ಗಳ ಬಗ್ಗೆ ಅಧ್ಯಯನ ನಡೆಸುತ್ತಾ ಬಂದಿದೆ ಎಂದು ಸೋಮಶೇಖರಪ್ಪ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications