ಆರ್ಎಸ್ಎಸ್ನಿಂದ ಸ್ವದೇಶಿ ಅರ್ಥ ವ್ಯವಸ್ಥೆಯ ನೀಲನಕ್ಷೆ - ಸುದರ್ಶನ್
ಉಡುಪಿ : ಇನ್ನೊಂದು ವರ್ಷದೊಳಗೆ ಭಾರತೀಯ ಪರಿಸ್ಥಿತಿಗೆ ಸರಿ ಹೊಂದುವ ಸ್ವದೇಶಿ ಅರ್ಥ ವ್ಯವಸ್ಥೆಯಾಂದರ ನೀಲನಕ್ಷೆಯನ್ನು ಆರ್ಎಸ್ಎಸ್ ತಯಾರಿಸಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಕು.ಸೀ. ಸುದರ್ಶನ್ ಹೇಳಿದ್ದಾರೆ.
ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಬುಧವಾರ ಇಳಿಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಪಶ್ಚಿಮ ದೇಶಗಳ ಆರ್ಥಿಕ ಧೋರಣೆಯನ್ನು ಕಟುವಾಗಿ ಟೀಕಿಸಿದ ಸರಸಂಘ ಚಾಲಕರು- ಉಳಿವಿಗಾಗಿ ಹೋರಾಟ, ಬಲಿಷ್ಠರ ಉಳಿವು, ಪ್ರಕೃತಿಯ ಬಗ್ಗೆ ನಿರ್ಲಕ್ಷ್ಯ, ಉದಾರೀಕರಣ, ಜಾಗತೀಕರಣ ಮತ್ತು ಜಾಗತೀಕರಣ ನಮ್ಮ ಸಂಸ್ಕೃತಿ ಮತ್ತು ದೇಶೀಯ ಮಾರುಕಟ್ಟೆಯನ್ನು ಹಾಳು ಮಾಡಿದೆ ಎಂದರು .
ಭಾರತೀಯತೆ ಮೈಗೂಡಿಸಿಕೊಳ್ಳಿ : ದೇಶದಲ್ಲೀಗ 10 ಕೋಟಿ ಮಂದಿ ನಿರುದ್ಯೋಗಿಗಳಿದ್ದು, ವಿದೇಶೀ ಶಕ್ತಿಗಳು ಅವರನ್ನೆಲ್ಲಾ ಐಎಸ್ಐ ಭಯೋತ್ಪಾದಕರನ್ನಾಗಿ ಇಲ್ಲವೇ, ಮಾದಕ ದ್ರವ್ಯಗಳ ಕಳ್ಳ ಸಾಗಾಣಿಕೆದಾರರನ್ನಾಗಿ ಮಾಡುತ್ತಿವೆ ಎಂದು ಅವರು ಆಪಾದಿಸಿದರು. ಭಾರತದಲ್ಲಿರುವ ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಇಲ್ಲಿಯ ಸಂಸ್ಕೃತಿಯ ಬೇರುಗಳನ್ನು ಅರಿತುಕೊಂಡು ಭಾರತೀಯತೆಯನ್ನು ಮೈಗೂಡಿಸಿಕೊಳ್ಳಬೇಕು. ಭಾರತೀಯ ಕ್ರಿಶ್ಚಿಯನ್ನರು ವ್ಯಾಟಿಕನ್ ಕಡೆಗೆ ಮುಖ ಮಾಡಿರುವುದನ್ನು ಬಿಡಬೇಕು. ಅಲ್ಲಿಯ ಸಂಬಂಧ ಕಳಚಿಕೊಂಡು ಭಾರತೀಯ ರಾಷ್ಟ್ರೀಯ ಚರ್ಚ್ಗಳನ್ನು ಸ್ಥಾಪಿಸಬೇಕು ಎಂದೂ ಸಲಹೆ ಮಾಡಿದರು
ಬೌದ್ಧಿಕ ವರ್ಗಕ್ಕೆ ಮುನ್ನ ಮೂರು ಕಡೆಗಳಿಂದ ಉಡುಪಿಯ ಪ್ರಮುಖ ಮಾರ್ಗಗಳಲ್ಲಿ ಗಣವೇಷ ಧರಿಸಿದ ಸ್ವಯಂ ಸೇವಕರ ಪಥ ಸಂಚಲನಗಳು ಘೋಷ ನಾದದೊಂದಿಗೆ ನಡೆದವು.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications