ಪ್ರಧಾನಿಯಿಂದ ‘ಆಪರೇಷನ್ ಸಹಾಯತಾ ಗುಜರಾತ್’ ಪರಿಶೀಲನೆ
ಕಾಂಡ್ಲಾ : ಹವಾಮಾನ ವೀಕ್ಷಣಾಲಯದ ಎಚ್ಚರಿಕೆಗಳನ್ನು ಬದಿಗೊತ್ತಿ ಭೂಕಂಪ ಪೀಡಿತ ಗುಜರಾತ್ನ ಸಂತ್ರಸ್ತರ ನೋವಿನಲ್ಲಿ ಭಾಗಿಯಾಗಲು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸೋಮವಾರ ತಮ್ಮ ಸಂಪುಟದ ಕೆಲವು ಸಹೋದ್ಯೋಗಿಗಳೊಂದಿಗೆ ಸೋಮವಾರ ಸಂಜೆ ಇಲ್ಲಿಗೆ ಆಗಮಿಸಿದರು.
ಭೂಕಂಪದಿಂದ ತತ್ತರಿಸಿರುವ ಹಲವು ಪ್ರದೇಶಗಳಿಗೆ ಪ್ರಧಾನಿ ಭೇಟಿ ನೀಡಿದರು. ಗೃಹ ಸಚಿವ ಎಲ್. ಕೆ. ಆಡ್ವಾಣಿ, ಆರೋಗ್ಯ ಸಚಿವ ಸಿ.ಪಿ. ಠಾಕೂರ್, ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ, ಬಿ.ಜೆ.ಪಿ. ಹಿರಿಯ ನಾಯಕ ಸಾಹಿಬ್ ಸಿಂಗ್ ವರ್ಮಾ ಹಾಗೂ ಸೇನಾ ಮುಖ್ಯಸ್ಥರು ಮತ್ತು ಬಿಎಸ್ಎಫ್ ಅಧಿಕಾರಿಗಳ ಜತೆಗೂಡಿ ಅಟಲ್ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.
ಆಪರೇಷನ್ ಸಹಾಯತಾ ಗುಜರಾತ್ ವಿಶೇಷ ಕಾರ್ಯಾಚರಣೆಯ ಕಾರ್ಯವೈಖರಿಯನ್ನೂ ಪರಿಶೀಲಿಸಿದ ಅವರು, ಹಲವು ಸಲಹೆ ಹಾಗೂ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು. ಮುಂದಿನ 48 ಗಂಟೆಗಳ ಅವಧಿಯಲ್ಲಿ ಮತ್ತೆ ಮತ್ತೆ ಭೂಕಂಪ ಸಂಭವಿಸುವ ಸಾಧ್ಯತೆಗಳು ಇರುವ ಕಾರಣ ಭೇಟಿ ಕಾರ್ಯಕ್ರಮ ರದ್ದು ಮಾಡುವಂತೆ ನೀಡಲಾಗಿದ್ದ ಎಚ್ಚರಿಕೆಯನ್ನೂ ಅವರು ಕಡೆಗಣಿಸಿದರು.
ಈವರೆಗೆ 25 ಸಾವಿರ ಮಂದಿ ಸತ್ತಿದ್ದಾರೆ ಎಂಬ ವರಿದಿಗಳು ಬಂದಿದ್ದು, ಸುಮಾರು 25 ಸಾವಿರ ಕೋಟಿ ರುಪಾಯಿಗಳ ಹಾನಿ ಆಗಿದೆ ಎಂದು ಅಂದಾಜು ಮಾಡಲಾಗಿದೆ. ಭುಜ್ ಹಾಗೂ ಕಛ್ನಲ್ಲಿ ಕೊಳೆತ ಶವಗಳ ದುರ್ವಾಸನೆ ಹಬ್ಬಿದ್ದು, ಸಾಂಕ್ರಾಮಿಕ ರೋಗ ಹಬ್ಬುವ ಭೀತಿಯೂ ಉಂಟಾಗಿದೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರುತ್ತಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದೆ. ಹೊಸ ಸಮಸ್ಯೆಗಳೂ ಹುಟ್ಟಿಕೊಳ್ಳುತ್ತಿವೆ.
ಪ್ರಧಾನಿಯವರು ವೈಮಾನಿಕ ಸಮೀಕ್ಷೆಯ ನಂತರ ಅಹಮದಾಬಾದ್ ತಲುಪಿದ್ದು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪ್ರಧಾನಿಯವರ ಈ ಭೇಟಿಯಿಂದ ಪರಿಹಾರ ಕಾಮಗಾರಿ ಮತ್ತಷ್ಟು ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ರಾಜ್ಯದ ಸಂತ್ರಸ್ತರು ಹಾಗೂ ಆಡಳಿತ ವರ್ಗದಲ್ಲಿ ಹೊಸ ಭರವಸೆ ಮೂಡಿದೆ ಎಂದು ಗುಜರಾತ್ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications