ಬೆಂಗಳೂರಿನ ಕೆಲವೆಡೆ 20 ಸೆಕೆಂಡುಗಳ ಭೂಕಂಪ:ಭಯಗ್ರಸ್ತ ಜನತೆ
ಬೆಂಗಳೂರು : ಸೋಮವಾರ ಬೆಳಿಗ್ಗೆ 08.15 ರ ಸಮಯ. ಜನ ಒಮ್ಮೆಗೇ ಜೀವಭಯದಿಂದ ಕೂಗುತ್ತ ಮನೆಗಳಿಂದ ಬೀದಿಗೆ ಓಡಿ ಬಂದರು. ಅವರೆಲ್ಲರ ಕಣ್ಣ ಮುಂದೆ ಗುಜರಾತ್ ದುರಂತದ ಚಿತ್ರಗಳಿದ್ದವು.
ನಗರದ ಇಂದಿರಾ ನಗರ, ಕೋಣನ ಕುಂಟೆ, ಲಕ್ಕಸಂದ್ರ, ಜಯನಗರ, ಕೆಂಗೇರಿ, ಮಲ್ಲೇಶ್ವರಂ, ವಿಜಯ ನಗರಗಳಲ್ಲಿ 20 ಸೆಕೆಂಡುಗಳ ಕಾಲ ಭೂಕಂಪ ಸಂಭವಿಸಿದೆ. ಈ ನಡುಕದಿಂದ ಜನರು ಒಮ್ಮೆಗೇ ಮನೆಯಿಂದ ಹೊರಗೆ ಓಡಿ ಬಂದರು. ಕಂಪ್ಯೂಟರ್ ಮುಂದೆ ಕೆಲಸ ಮಾಡುತ್ತಿದ್ದವರು ತುಸು ಹೊತ್ತು ಕಂಪ್ಯೂಟರ್ ಹದ ತಪ್ಪಿರುವುದಾಗಿ ಹೇಳಿದ್ದಾರೆ. ಬಹು ಮಹಡಿ ಕಟ್ಟಡಗಳಲ್ಲಿ ವಾಸಿಸುತ್ತಿದ್ದವರು ಭೂಮಿ ನಡುಗುತ್ತಿರುವ ಅನುಭವವಾದ ಕೂಡಲೇ ಜೀವಭಯದಿಂದ ಕಟ್ಟಡಗಳಿಂದ ಆಚೆಗೆ ಓಡಿ ಬಂದಿದ್ದಾರೆ.
ನಗರದ ಹಲವು ಕಡೆಗಳಲ್ಲಿ ಭೂಕಂಪವಾಗಿರುವ ವರದಿಗಳು ಬಂದಿರುವುದನ್ನು ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್ ಖಚಿತ ಪಡಿಸಿದ್ದಾರೆ. ಆದರೆ, ಯಾವುದೇ ಹಾನಿ ಸಂಭವಿಸಿದ ವರದಿಯಾಗಿಲ್ಲ. ಭೂಮಿ ಕಂಪಿಸಿರುವ ಅನುಭವವಾಗಿರುವುದು ನಿಜ ಎಂದು ಅವರು ಹೇಳಿದ್ದಾರೆ.
ಇದುವರೆಗೆ ಗೌರಿಬಿದನೂರಿನ ಭೂಕಂಪನ ಮಾಪನ ಕಚೇರಿಯಿಂದ ಬೆಂಗಳೂರಿನಲ್ಲಿ ಭೂಕಂಪ ಸಂಭವಿಸಿರುವ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಗುಜರಾತ್ ಭೂಕಂಪದ ನಂತರದ ಪರಿಣಾಮ ಇದಾಗಿರಬಹುದೆಂದು ಬೆಂಗಳೂರಿನ ತಜ್ಞರು ಹೇಳಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications