ಗುಜರಾತ್ ಭೂಕಂಪ : ಮರಳಿ ಮಣ್ಣಿಗೆ 25 ಸಾವಿರ ಮಂದಿ
ಅಹಮದಾಬಾದ್ : ಗುಜರಾತ್ನಲ್ಲಿ ಮರಳಿ ಮಣ್ಣಿಗೆ ಸೇರುತ್ತಿರುವವರ ಸಂಖ್ಯೆ ಮುಂದುವರಿಯುತ್ತಿದ್ದು , ಈವರೆಗೆ ಕನಿಷ್ಠ 25 ಸಾವಿರ ಮಂದಿ ಭೂಕಂಪಕ್ಕೆ ಬಲಿಯಾಗಿದ್ದಾರೆ ಹಾಗೂ ಅಹಮದಾಬಾದ್, ಭುಜ್, ಅಂಜಾರ್ ಮತ್ತು ಕಛ್ ಪ್ರಾಂತ್ಯಗಳಲ್ಲಿ ಸುಮಾರು 1 ಲಕ್ಷ ಮಂದಿ ಕಟ್ಟಡಗಳ ಅವಶೇಷಗಳಡಿ ಸಿಕ್ಕಿಬಿದ್ದಿದ್ದಾರೆಂದು ಇತ್ತೀಚಿನ ವರದಿಗಳು ತಿಳಿಸಿವೆ.
ಸೋಮವಾರ ಬೆಳಿಗ್ಗೆ ಕೂಡ ಭುಜ್ ಪ್ರದೇಶದಲ್ಲಿ ಭೂಕಂಪಗಳ ಹಾವಳಿ ಮರುಕಳಿಸಿತು. ಈ ಕಂಪನಗಳ ತೀವ್ರತೆಯನ್ನು ದೆಹಲಿಯಲ್ಲಿನ ರಿಕ್ಟರ್ ಮಾಪಕಗಳು 3.5 ಮತ್ತು 4.6 ಎಂದು ದಾಖಲಿಸಿರುವುದಾಗಿ ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.
ಗುಜರಾತಿಗೆ ಪ್ರಧಾನಿ ಭೇಟಿ : ಸಂಪುಟದ ಸಹೋದ್ಯೋಗಿಗಳು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ವಾಜಪೇಯಿ, ಭೂಕಂಪದ ತಾಂಡವಕ್ಕೆ ತುತ್ತಾದ ಭುಜ್ ಮತ್ತು ಕಛ್ ಪ್ರದೇಶಗಳ ವೈಮಾನಿಕ ಸಮೀಕ್ಷೆ ಯನ್ನು ಸೋಮವಾರ ನಡೆಸಿದರು.
ಈ ನಡುವೆ ಸೇನೆ ಹಾಗೂ ಖಾಸಗಿ ಸಂಘ ಸಂಸ್ಥೆಗಳು ಪರಿಹಾರ ಕಾರ್ಯದಲ್ಲಿ ಎಡೆಬಿಡದೆ ತೊಡಗಿವೆ. ವಿದೇಶಿ ನೆರವು ಕೂಡ ಸೋಮವಾರ ಗುಜರಾತನ್ನು ಮುಟ್ಟಿದೆ. ಕಾಂಡ್ಲಾ ಬಂದರಿನಲ್ಲಿ ಎರಡು ಹಡಗುಗಳನ್ನು ಆಸ್ಪತ್ರೆಗಳಾಗಿ ಪರಿವರ್ತಿಸಲಾಗಿದೆ.
ಸೇಲಂ ವರದಿ : ತಮಿಳುನಾಡಿನ ಹೊಸೂರು, ಕೃಷ್ಣಗಿರಿ ಹಾಗೂ ಕರ್ನಾಟಕದ ಕೆಲ ಭಾಗಗಳಲ್ಲಿ ಸೋಮವಾರ ಬೆಳಿಗ್ಗೆ ಲಘು ಭೂಕಂಪ ಸಂಭವಿಸಿದೆ. ಹೊಸೂರಿನಲ್ಲಿ ಭೂಕಂಪದ ತೀವ್ರತೆಗೆ ಶಾಲಾ ಕಟ್ಟಡವೊಂದು ಜಖಂ ಗೊಂಡಿದ್ದು , ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ. ಆದರೆ, ಯಾವುದೇ ಜೀವಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ .
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications