ಮತ್ತೆ ಭೂಕಂಪದ ಭಯ, ಶಾಲಾ ಕಾಲೇಜುಗಳಿಗೆಸ್ವ ಘೋಷಿತ ರಜೆ
ಬೆಂಗಳೂರು : ಸೋಮವಾರ ಮಧ್ಯಾಹ್ನ ನಗರದಲ್ಲಿ ಮತ್ತೊಂದು ಭೂಕಂಪ ಸಂಭವಿಸಬಹುದು ಎನ್ನುವ ವದಂತಿ ದಟ್ಟವಾಗಿ ಹಬ್ಬುತ್ತಿದ್ದು , ಅನೇಕ ಶಾಲಾ ಕಾಲೇಜುಗಳು ಮುಂಜಾಗರೂಕತೆಯ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿ-ತ ರಜೆ ಘೋಷಿಸಿವೆ.
ಹವಾಮಾನ ಇಲಾಖೆಯ ರಿಕ್ಟರ್ ಮಾಪಕ ಬೆಂಗಳೂರಿನಲ್ಲಿ ಸಂಭವಿಸಿದ ತೀವ್ರತೆಯನ್ನು 4.3 ಎಂದು ದಾಖಲಿಸಿದೆಯೆಂದು ಹವಾಮಾನ ಇಲಾಖೆಯ ನಿರ್ದೇಶಕ ಎ.ಎಲ್. ಕೊಪ್ಪರ್ ತಿಳಿಸಿದ್ದಾರೆ. ಆದರೆ, ಈ ಭೂಕಂಪಕ್ಕೂ, ಗುಜರಾತ್ನ ಭೂಕಂಪಕ್ಕೂ ಸಂಬಂಧವಿಲ್ಲ ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
ಜೀವ ಬಾಯಿಗೇ ಬಂತೂರಿ. ಸೋಮವಾರ ಬೆಳಿಗ್ಗೆ ಬೆಂಗಳೂರಿನ ನಾಲ್ಲೂ ಮೂಲೆಗಳಲ್ಲಿ ಸಂಭವಿಸಿದ ಲಘು ಭೂಕಂಪದ ಅನುಭವವನ್ನು ಜನ ಬಣ್ಣಿಸುತ್ತಿರುವುದು ಹೀಗೆ. ಬಹುಮಹಡಿ ಕಟ್ಟಡಗಳಿಂದ ಭಯಗ್ರಸ್ತ ಜನತೆ ಬೀದಿಗೆ ಓಡಿ ಬಂದಿದ್ದಾರೆ. ಅನೇಕ ಕಟ್ಟಡಗಳ ಕಿಟಕಿ ಸರಳುಗಳು ದೊಡ್ಡ ಶಬ್ದದಿಂದ ಕಂಪಿಸಿದವು, ಜೋಡಿಸಿಟ್ಟಿದ್ದ ಪಾತ್ರೆಗಳು ದಡಬಡ ಸದ್ದು ಮಾಡಿದವು ಎಂದು ಭೂಕಂಪದ ತೀವ್ರತೆ ಅನುಭವಿಸಿದವರು ಹೇಳುತ್ತಿದ್ದಾರೆ.
ಹಾಜರಾತಿ ಕಡಿಮೆ : ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲೂ ಹಾಜರಾತಿ ಮಾಮೂಲಿಗಿಂತ ಕಡಿಮೆಯಿರುವುದು ಕಂಡುಬಂದಿದೆ. ಅನೇಕರು ಕುಟುಂಬದೊಂದಿಗೆ ಇರುವ ಉದ್ದೇಶದಿಂದ ದೂರವಾಣಿ ಮೂಲಕವೇ ಕಚೇರಿಗೆ ರಜೆ ತಿಳಿಸಿದ್ದಾರೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಭೂಕಂಪ ಸಂಭವಿಸಿರುವುದನ್ನು ಖಚಿತಪಡಿಸಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸಿ. ದಿನಕರ್, ಯಾವುದೇ ಆಸ್ತಿ - ಜೀವ ಹಾನಿಯ ವರದಿಗಳು ಬಂದಿಲ್ಲ ಎಂದಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications