ಶಾಶ್ವತ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರ ರಚನೆ ಸಲಹೆ
ಬೆಂಗಳೂರು : ಪೋಖ್ರಾನ್ನಲ್ಲಿ ಭಾರತ ನಡೆಸಿದ ಅಣ್ವಸ್ತ್ರ ಪರೀಕ್ಷೆಯಿಂದಲೇ ಗುಜರಾತ್ನಲ್ಲಿ ಜನವರಿ 26ರಂದು ಭೀಕರ ಭೂಕಂಪ ಸಂಭವಿಸಿದೆ ಎಂಬುದು ತಪ್ಪು ಕಲ್ಪನೆ, ಅಣು ಪರೀಕ್ಷೆಗೂ - ಭೂಕಂಪಕ್ಕೂ ಸಂಬಂಧ ಇಲ್ಲ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಮುರಳಿ ಮನೋಹರ ಜೋಷಿ ಸೋಮವಾರ ಬೆಂಗಳೂರಿನಲ್ಲಿ ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಣ್ ಆಫ್ ಕಛ್ ಪ್ರದೇಶ ಭೌಗೋಳಿಕವಾಗಿ ಸೂಕ್ಷ್ಮವಾದ ಭೂ ಭಾಗವಾಗಿದ್ದು, ಪೋಖ್ರಾನ್ನಲ್ಲಿ ನಡೆಸಲಾದ ಎರಡು ಅಣ್ವಸ್ತ್ರ ಪರೀಕ್ಷೆಗಳಿಗೂ ಈ ಪ್ರಕೃತಿ ವಿಕೋಪಕ್ಕೂ ಒಂದಕ್ಕೊಂದು ಸಂಬಂಧವಿಲ್ಲ ಎಂದು ಅವರು ಪ್ರತಿಪಾದಿಸಿದರು.
ಶಾಶ್ವತ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರ : ರಾಷ್ಟ್ರದಲ್ಲಿ ಪದೇಪದೇ ಸಂಭವಿಸುತ್ತಿರುವ ಚಂಡಮಾರುತ, ಭೂಕಂಪವೇ ಮೊದಲಾದ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ತುರ್ತಾಗಿ ಹಾಗೂ ಸೂಕ್ತವಾಗಿ ಕಾರ್ಯ ನಿರ್ವಹಿಸಲು ಶಾಶ್ವತ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರ ಒಂದನ್ನು ರಚಿಸಬೇಕು ಎಂದೂ ಅವರು ಸಲಹೆ ಮಾಡಿದರು.
ಇದಕ್ಕೂ ಮುನ್ನ ಏಷಿಯನ್ ಮತ್ತು ಫೆಸಿಪಿಕ್ ತಂತ್ರಜ್ಞಾನ ವರ್ಗಾವಣೆ ಕೇಂದ್ರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಭೂಕಂಪದಿಂದ ಉಂಟಾಗುವ ತೀವ್ರ ಹಾನಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಆವಿಷ್ಕಾರಗಳನ್ನು ಮಾಡಬೇಕೆಂದು ವಿಜ್ಞಾನಿಗಳಿಗೆ ಹಾಗೂ ತಂತ್ರಜ್ಞರಿಗೆ ಕರೆ ನೀಡಿದರು. ಭೂಕಂಪದ ತೀವ್ರತೆಯನ್ನು ತಡೆದುಕೊಳ್ಳುವ ಕಟ್ಟಡ ನಿರ್ಮಾಣಗಳ ಬಗ್ಗೆ ಕೂಡ ಅಧ್ಯಯನ ನಡೆಸಬೇಕೆಂದು ಅವರು ಅಭಿಪ್ರಾಯಪಟ್ಟರು. (ಯು.ಎನ್.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications