ರಾಜ್ಯದಲ್ಲಿ ಭೂಕಂಪ : ಹಾರೋಹಳ್ಳಿಯಲ್ಲಿ 200 ಮನೆ ಬಿರುಕು
ಬೆಂಗಳೂರು : ಸೋಮವಾರ ಮುಂಜಾನೆ 8 ಗಂಟೆ 15 ನಿಮಿಷಕ್ಕೆ 2 ಸೆಕೆಂಡುಗಳ ಕಾಲ ಸಂಭವಿಸಿದ ಭೂಕಂಪದ ಪರಿಣಾಮವಾಗಿ ಕೊಳ್ಳೇಗಾಲದಿಂದ 30 ಕಿ.ಮೀ. ದೂರದಲ್ಲಿರುವ ಉಡುತೊರೆ ಹಳ್ಳದಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ.
ನಿರ್ಮಾಣ ಹಂತದಲ್ಲಿರುವ, 200 ಕೋಟಿ ರೂಪಾಯಿಯ ಅಣೆಕಟ್ಟಿನ ಮಣ್ಣಿನ ಅಡ್ಡ ತಡೆಯಲ್ಲಿ ಸುಮಾರು 30 ಮೀಟರ್ಗಳಷ್ಟು ಉದ್ದಕ್ಕೆ ಬಿರುಕುಗಳು ಕಾಣಿಸಿಕೊಂಡಿವೆ. ಅಲ್ಲಿನ ಯೋಜನಾ ಸಿಬ್ಬಂದಿಗಳ ಕ್ವಾಟರ್ಸ್ಗಳ ಗೋಡೆಯಲ್ಲಿಯೂ ಸಣ್ಣ ಪುಟ್ಟ ಬಿರುಕುಗಳು ಗೋಚರಿಸಿವೆ. ಉಳಿದಂತೆ-
- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಾರೋಹಳ್ಳಿಯಲ್ಲಿ ಸುಮಾರು ಇನ್ನೂರು ಮನೆಗಳು ಬಿರುಕು ಬಿಟ್ಟಿದ್ದು, ಜನ ಈ ಹೊತ್ತೂ ಆತಂಕದಿಂದ ಹೊರ ಬಂದಿಲ್ಲ. ಶಾಸಕ ಪಿ.ಜಿ.ಆರ್.ಸಿಂಧ್ಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ನಾರಾಯಣ ಸ್ವಾಮಿ ಹಳ್ಳಿಗೆ ಭೇಟಿ ಕೊಟ್ಟು , ಜನರಲ್ಲಿ ಧೈರ್ಯ ತುಂಬಿದ್ದಾರೆ. ಪೊಲೀಸರು ಹಾಗೂ ಅಗ್ನಿ ಶಾಮಕ ದಳದವರು ಗಸ್ತು ಸುತ್ತುತ್ತಿದ್ದಾರೆ.
- ಬೆಂಗಳೂರಿನ ಕೆಂಗೇರಿಯ ಖಾಸಗಿ ವಸತಿ ಸಮುಚ್ಚಯ, ನಂದಿನಿ ಬಡಾವಣೆಯ ದೂರವಾಣಿ ವಿನಿಮಯ ಕಚೇರಿ, ಕೆಲವು ಶಾಲಾ-ಕಾಲೇಜುಗಳ ಕಟ್ಟಡಗಳು ಬಿರುಕು ಬಿಟ್ಟಿವೆ.
- ರಾಜ್ಯದ ಬಹುತೇಕ ಶಾಲಾ- ಕಾಲೇಜುಗಳಿಗೆ ಮತ್ತೊಂದು ಭೂಕಂಪದ ನಿರೀಕ್ಷೆಯ ಕಾರಣ ರಜೆ ಘೋಷಿಸಲಾಗಿತ್ತು.
- ಬೆಂಗಳೂರಿನ ಬಹುಮಹಡಿ ಕಟ್ಟಡ, ವಿವಿ ಟವರ್ಸ್, ಕಾವೇರಿ ಭವನ, ಎ.ಜಿ.ರಸ್ತೆಯ ಬಾನೆತ್ತರದ ಕಟ್ಟಡಗಳಿಂದ ಮಧ್ಯಾಹ್ನದ ಸುಮಾರಿಗೆ ಜನರನ್ನು ಹೊರಗೆ ಕಳುಹಿಸಲಾಗಿತ್ತು. ಸುಮಾರು 3-4 ತಾಸುಗಳ ಕಾಲ ಬಯಲ ತುಂಬೆಲ್ಲಾ ಜನ ಹಾಗೂ ಭೂಕಂಪದ ಮಾತುಗಳು ಹರಿದಾಡುತ್ತಿದ್ದವು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications