ಕಾಲೇಜು ಬೋಧನಾ ಶುಲ್ಕದಲ್ಲಿ ನೂರು ರುಪಾಯಿ ಇಳಿಕೆ
ಗುಲ್ಬರ್ಗಾ : ಕಾಲೇಜು ಮಟ್ಟದಲ್ಲಿ ರಾಜ್ಯ ಸರಕಾರ ಹೆಚ್ಚಿಸಿದ್ದ ಬೋಧನಾ ಶುಲ್ಕವನ್ನು ಇಳಿಸಿರುವುದಾಗಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಪರಮೇಶ್ವರ್ ಬುಧವಾರ ಇಲ್ಲಿ ಪ್ರಕಟಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ವೃತ್ತಿಪರ ಕಾಲೇಜುಗಳೂ ಸೇರಿದಂತೆ, ಕಾಲೇಜು ಶಿಕ್ಷಣದ ಬೋಧನಾ ಶುಲ್ಕದಲ್ಲಿ 100 ರುಪಾಯಿ ಕಡಿತಗೊಳಿಸಲಾಗಿದೆ ಎಂದು ತಿಳಿಸಿದರು.
500 ರುಪಾಯಿಗಳಿಗೆ ಏರಿಸಲಾಗಿದ್ದ ಶುಲ್ಕದಲ್ಲಿ ನೂರು ರು. ಕಡಿಮೆ ಮಾಡಿ 400 ರುಪಾಯಿಗಳಿಗೆ ತರಲಾಗಿದೆ. ಅಲ್ಲದೆ ಪ್ರಯೋಗಾಲಯ ಶುಲ್ಕದಲ್ಲೂ ಕೂಡ 50 ರುಪಾಯಿಯಷ್ಟು ಕಡಿಮೆ ಮಾಡಲಾಗಿದೆ. ಈಗಾಗಲೇ ಹೆಚ್ಚಳವಾಗಿದ್ದ ಶುಲ್ಕ ಶ್ರೇಣಿಯಲ್ಲೇ ಹಣ ಪಾವತಿಸಿರುವ ವಿದ್ಯಾರ್ಥಿಗಳು ತಾವು ಹೆಚ್ಚುವರಿಯಾಗಿ ಪಾವತಿಸಿರುವ ಹಣವನ್ನು ಹಿಂದಕ್ಕೆ ಪಡೆಯಬಹುದಾಗಿದೆ ಎಂದೂ ತಿಳಿಸಿದರು.
ಕರ್ನಾಟಕ ಸರಕಾರ ಕಾಲೇಜು, ವೃತ್ತಿ ಶಿಕ್ಷಣ ಕಾಲೇಜುಗಳ ಶುಲ್ಕವನ್ನು ಏರಿಸಿದ್ದನ್ನು ಪ್ರತಿಭಟಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಎಸ್.ಎಫ್.ಐ ಮತ್ತು ಡಿವೈಎಫ್ಐ ಮುಂತಾದ ವಿದ್ಯಾರ್ಥಿ ಸಂಘಟನೆಗಳು ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಲ್ಲದೆ, ಸಚಿವರುಗಳಿಗೆ ಘೕರಾವ್ ಮಾಡಿದ್ದನ್ನೂ ಇಲ್ಲಿ ಸ್ಮರಿಸಬಹುದಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications