ಸಿಂಧೂ ಕಣಿವೆ ನಾಗರಿಕತೆ ಹಾಳಾಗಲೂ ಭೂಕಂಪವೇ ಕಾರಣ
ಬೆಂಗಳೂರು : ಸಿಂಧೂ ಕಣಿವೆ (ಇಂಡಸ್ ವ್ಯಾಲಿ ಸಿವಿಲೈಸೇಷನ್) ನಾಗರಿಕತೆಯನ್ನು ಹಾಳು ಮಾಡಿದ್ದೂ ಭೂಕಂಪವೇ, ಸಿಂಧೂ ನದಿಯ ಮಾರ್ಗವನ್ನು ಬದಲಿಸಿದ್ದೂ ಭೂಕಂಪವೇ ಇರಬೇಕೆಂದು ಭಾಭಾ ಅಣುಶಕ್ತಿ ಕೇಂದ್ರದ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಗುಜರಾತ್ಗೆ ಭೂಕಂಪ ಹೊಸದೇನೂ ಅಲ್ಲ. ಈವರೆಗೆ ಅಲ್ಲಿ 257ಕ್ಕೂ ಹೆಚ್ಚು ಬಾರಿ ಭೂಕಂಪ ಸಂಭವಿಸಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಜಮ್ಮು - ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಂಚಲ, ವನಾಂಚಲ, ಪೂರ್ವಾಂಚಲ, ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳನ್ನು ಸ್ಮೂಕ್ಷ ಪ್ರದೇಶಗಳೆಂದು ಗುರುತಿಸಲಾಗಿದ್ದು ಇಲ್ಲಿ ಭೂಕಂಪದ ಸಾಧ್ಯತೆಗಳು ಹೆಚ್ಚು ಎಂದೂ ಅವರು ಹೇಳಿದ್ದಾರೆ.
ಭಾರಿ ಭೂಕಂಪ ಸಂಭವಿಸಿದ ತರುವಾಯ ಲಘು ಭೂಕಂಪಗಳು ಘಟಿಸುವುದು ಸರ್ವೇಸಾಮಾನ್ಯ. ಹೀಗಾಗೇ ಗುಜರಾತ್ನಲ್ಲಿ ಶುಕ್ರವಾರದಿಂದೀಚೆಗೆ 100ಕ್ಕೂ ಹೆಚ್ಚು ಬಾರಿ ಭೂಕಂಪ ಆಗಿರುವುದು ಎಂಬುದು ಅವರುಗಳ ಅಭಿಪ್ರಾಯ. ರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ಭೂಕಂಪ ಸಂಭವಿಸುತ್ತದೆ ಎಂದು ಪತ್ತೆ ಮಾಡಲಾಗಿದೆಯಾದರೂ, ಎಂದು ಅಲ್ಲಿ ಭೂಕಂಪ ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲದ ಕಾರಣ ಆ ಪ್ರದೇಶಗಳ ಹೆಸರು ಬಹಿರಂಗಪಡಿಸುತ್ತಿಲ್ಲ ಎನ್ನುವ ಡೆಹ್ರಾಡೂನ್ ವಾಡಿಯಾ ಹಿಮಾಲಯ ಭೂ ವಿಜ್ಞಾನ ಸಂಸ್ಥೆ ತಜ್ಞರು. ಹಾಗೇನಾದರೂ ನಾವು ಊರುಗಳ ಹೆಸರು ಹೇಳಿದರೆ, ಜನ ಅನಗತ್ಯವಾಗಿ ಆತಂಕಕ್ಕೆ ಒಳಗಾಗುತ್ತಾರೆ ಎನ್ನುತ್ತಾರೆ.
ಜನವರಿ 26ರಂದು ಸಂಭವಿಸಿದ ಭೂಕಂಪಕ್ಕೆ ವಾರಗಳ ಮೊದಲೇ ಭೂಗರ್ಭದಲ್ಲಿ ಅನಿಲ ಬಿಡುಗಡೆಯಾಗಿತ್ತು ಎನ್ನುವ ವಿಜ್ಞಾನಿಗಳು ಜಿಪಿಎಸ್ ವ್ಯವಸ್ಥೆಯಿಂದ ಭೂಕಂಪದ ಮುನ್ಸೂಚನೆ ಪಡೆಯಲು ಸಾಧ್ಯ ಎಂದೂ ತಿಳಿಸಿದ್ದಾರೆ. ಭೂಗರ್ಭದೊಳಗೆ ನಡೆವ ಕ್ರಿಯೆಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದರೆ, ಭೂಕಂಪದ ಬಗ್ಗೆ ನಿಖರ ಮಾಹಿತಿ ಕೊಡಲು ಸಾಧ್ಯ ಎಂದೂ ಅವರು ವಾದಿಸುತ್ತಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications