ಸಚಿವ ಜಾನ್ ವಿರುದ್ಧ ಕಠಿಣ ಕ್ರಮಕ್ಕೆ ಶುಕ್ರವಾರದ ಗಡುವು
ಬೆಂಗಳೂರು : ಕೇವಲ ರಾಜೀನಾಮೆ ಕೊಟ್ಟರೆ ಸಾಲದು. ಭಾರತೀಯ ದಂಡ ಸಂಹಿತಯ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಬೇಕು. ಇದು ಪ್ರಚೋದನಕಾರಿ ಹೇಳಿಕೆ ನೀಡಿ ರಾಜೀನಾಮೆ ಕೊಟ್ಟ ಸಚಿವ ಜಾನ್ ವಿರುದ್ಧ ಬಿ.ಜೆ.ಪಿ. ಹಿಡಿದಿರುವ ಬಿಗಿಪಟ್ಟು.
ಸಮಾಜದಲ್ಲಿ ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ನಾಗರಿಕ ವಿಮಾನಯಾನ ಸಚಿವ ಟಿ. ಜಾನ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 153ರ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಸಚಿವರ ರಾಜೀನಾಮೆಯಿಂದ ತೃಪ್ತರಾಗದ ಬಿ.ಜೆ.ಪಿ. ನಾಯಕರು ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಕೃಷ್ಣ ಅವರಿಗೆ ಶುಕ್ರವಾರದವರೆಗೆ ಗಡುವೂ ನೀಡಿದ್ದಾರೆ.
ಭೀಕರ ಭೂಕಂಪದಿಂದ ಸಾವಿರಾರು ಮಂದಿ ಸಾವನ್ನಪ್ಪಿರುವ ಸಂದರ್ಭದಲ್ಲಿ ವಿಶ್ವವೇ ಕಂಬನಿ ಮಿಡಿಯುತ್ತಿರುವಾಗ ರಾಜ್ಯದ ಸಚಿವರು ಇಂತಹ ಅಮಾನವೀಯ ಹೇಳಿಕೆ ನೀಡುವುದು ಅಕ್ಷಮ್ಯ ಅಪರಾಧ. ಈ ಸಚಿವರನ್ನು ಬಂಧಿಸಬೇಕು ಎಂದು ಮುಖಂಡರು ಗಾಂಧೀ ಪ್ರತಿಮೆಯ ಎದುರು ಧರಣಿ ನಡೆಸಿದ್ದಾರೆ.
ಜಾನ್ ಹೇಳಿಕೆ ಕೇವಲ ಬಾಯಿತಪ್ಪಿ ಬಂದ ಮಾತುಗಳಲ್ಲ. ಅದು ಸುದೀರ್ಘ ಪ್ರಚೋದನಕಾರಿ ಭಾಷಣ ಎಂದಿರುವ ಯಡಿಯೂರಪ್ಪ ಅವರು ಪಕ್ಷದ ಇತರ ಸದಸ್ಯರಾದ ಸುರೇಶ್ಕುಮಾರ್, ರಾಮಚಂದ್ರಗೌಡ, ಶ್ರೀನಿವಾಸ್, ಅಶೋಕ್, ಸುಬ್ರಹ್ಮಣ್ಯ ನಾಯ್ಡು ಮತ್ತಿತ್ತರ ಜತೆಗೂಡಿ ಧರಣಿ ನಡೆಸಿದ್ದಾರೆ.
ಅಘಾತಕಾರಿ ಹೇಳಿಕೆ ಸಿಂಧ್ಯಾ : ಜಾನ್ ಅವರ ಹೇಳಿಕೆಯನ್ನು ಖಂಡಿಸಿರುವ ಜನತಾದಳ ಮುಖಂಡ ಪಿ.ಜಿ.ಆರ್. ಸಿಂಧ್ಯಾ ಅವರು ಇದೊಂದು ಆಘಾತಕಾರಿ ಹೇಳಿಕೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಹೀಗೆ ಮಾತನಾಡುವುದು ಸಲ್ಲ. ಭೂಕಂಪ ಜಾತಿ ಅಥವಾ ಧರ್ಮದ ಮೇರೆಗೆ ಉಂಟಾಗಿಲ್ಲ. ಈ ಹೇಳಿಕೆ ಇಡೀ ಮಾನವ ಕುಲವೇ ತಲೆತಗ್ಗಿಸುವಂತಹದ್ದು ಎಂದಿದ್ದಾರೆ.
ಜಾನ್ ಹೇಳಿಕೆಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ರಾಜ್ಯ ಬಿ.ಜೆ.ಪಿ. ಅಧ್ಯಕ್ಷ ಸೇಡಂ ಅವರು, ಗೂಂಡಾ ಕಾಯಿದೆ ಅಡಿ ಜಾನ್ ಅವರನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ರಾಜ್ಯಾದ್ಯಂತ ಧರಣಿ, ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದೂ ಅವರು ಎಚ್ಚರಿಸಿದ್ದಾರೆ.
ಸಭಾತ್ಯಾಗ : ಬುಧವಾರ ನಡೆದ ಬೆಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲಿ ಜಾನ್ ಹೇಳಿಕೆ ಖಂಡಿಸಿದ ಬಿ.ಜೆ.ಪಿ. ಸದಸ್ಯರು ಸಭಾತ್ಯಾಗ ಮಾಡಿದರು. ಸಚಿವರ ಈ ಹೇಳಿಕೆಯನ್ನು ವಿಶ್ವಹಿಂದೂ ಪರಿಷತ್, ಗುಜರಾತಿ ವೈಷ್ಣವ ಸಮಾಜ ಖಂಡಿಸಿದೆ. ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಸರ್ವತ್ರ ಖಂಡನೆ ಕೇಳಿಬಂದಿದೆ.
ವಾರ್ತಾಸಂಚಯ
ಮುಖಪುಟ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications