ಧರ್ಮದರ್ಶನದಲ್ಲಿ ನಾಗಪ್ಪ, ಕೆಲಸಕೊಡಿಸಲುಮುಖ್ಯಮಂತ್ರಿಗೆ ಮೊರೆ
ಬೆಂಗಳೂರು : ವೀರಪ್ಪನ್ ಅಡಗುತಾಣದಿಂದ ಓಡಿ ಬಂದ ಒತ್ತೆಯಾಳು ನಾಗಪ್ಪ ಹೊಟ್ಟೆಪಾಡಿಗೊಂದು ಉದ್ಯೋಗ, ಸ್ವಲ್ಪ ಹಣಕಾಸಿನ ನೆರವು ಹಾಗೂ ಗೃಹಮಂಡಳಿ ವತಿಯಿಂದ ಮನೆ ಕೊಡಿಸುವಂತೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಗುರುವಾರ ಬೆಳಿಗ್ಗೆ ಧರ್ಮದರ್ಶನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಾಗಪ್ಪ ತಮಗೆ ನೆರವು ನೀಡುವಂತೆ ಮನವಿ ಸಲ್ಲಿಸಿದರು. ಸದ್ಯಕ್ಕೆ ತಮಗೆ ಯಾವುದೇ ಉದ್ಯೋಗವಿಲ್ಲ . ಆದಾಯದ ಮೂಲಗಳೂ ಇಲ್ಲ . ಜೀವನ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ನೆರವು ನೀಡಬೇಕೆಂದು ಮುಖ್ಯಮಂತ್ರಿಗಳನ್ನು ಕೋರಿದರು. ನಾಗಪ್ಪ ಅವರ ಮನವಿಯನ್ನು ಸಾವಧಾನದಿಂದ ಆಲಿಸಿದ ಮುಖ್ಯಮಂತ್ರಿಗಳು, ಅವರ ಮನವಿಯನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ರೊಂದಿಗೆ ವನವಾಸ ಅನುಭವಿಸುವ ಮುನ್ನ , ನಾಗಪ್ಪನವರು ರಾಜ್ ಕ್ಯಾಂಪ್ನಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ವೀರಪ್ಪನ್ ಸೆರೆಯಿಂದ ಓಡಿಬಂದ ನಂತರ ಕೆಲಕಾಲ ಅಜ್ಞಾತವಾಸದಲ್ಲಿದ್ದ ಅವರು, ಆನಂತರ ಧಾರವಾಡ ಜಿಲ್ಲೆಯ ತಮ್ಮ ಸ್ವಗ್ರಾಮ ಮಾರಡಗಿಗೆ ತೆರಳಿದ್ದರು. ಪತ್ನಿ ಹಾಗೂ ಓರ್ವ ಪುತ್ರಿಯನ್ನು ಹೊಂದಿರುವ ನಾಗಪ್ಪ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ವೀರಪ್ಪ ನ್ ಸೆರೆಯಿಂದ ಓಡಿಬಂದ ಧೀರ ಎಂದು ನಮ್ಮ ಕನ್ನಡ ಹೋರಾಟಗಾರರು ನಾಗಪ್ಪ ಅವರಿಗೆ ಹಲವಾರು ಕಡೆಗಳಲ್ಲಿ ಸನ್ಮಾನ ಮಾಡಿದ್ದಾರೆ. ಆದರೆ, ಅದ್ಯಾವುದೂ ಅವರ ಹೊಟ್ಟೆ ತುಂಬಿಸಿಲ್ಲ . ಪ್ರಸ್ತುತ ನಾಗಪ್ಪ ಮುಖ್ಯಮಂತ್ರಿಗಳ ಮೊರೆ ಹೊಕ್ಕಿದ್ದಾರೆ. ಕಲಿಯುಗದಲ್ಲೂ ಕೃಷ್ಣ ಕರುಣೆ ಕುಚೇಲನ ಮೇಲೆ ಹರಿಯುತ್ತದೊ ನೋಡಬೇಕು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications