ಭೂಕಂಪ : ಪ್ರಧಾನಿಯಿಂದ ರೈಲು ದರ ಏರಿಸುವ ಸ್ಪಷ್ಟ ಸೂಚನೆ
ಲಖನೌ : ಭೂಕಂಪದಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಬಿದ್ದರೆ ರೈಲ್ವೆ ಪ್ರಯಾಣ ಹಾಗೂ ಸರಕು ಸಾಗಣೆ ದರವನ್ನು ಭಾರಿ ಪ್ರಮಾಣದಲ್ಲಿ ಏರಿಸುವುದು ಅನಿವಾರ್ಯವಾಗುತ್ತದೆ ಎಂಬ ಸ್ಪಷ್ಟ ಸೂಚನೆಯನ್ನು ಪ್ರಧಾನಿ ವಾಜಪೇಯಿ ನೀಡಿದ್ದಾರೆ.
ಮುಂಬರುವ ಬಜೆಟ್ನಲ್ಲಿ ಹೆಚ್ಚುವರಿ ತೆರಿಗೆ ತೆರಲು ಸಿದ್ಧರಾಗಿರಿ ಎಂದು ಹೇಳಿದ 24 ಗಂಟೆಗಳ ಒಳಗೇ ಪ್ರಧಾನಿ ರೈಲು ದರ ಏರಿಸುವ ಪ್ರಸ್ತಾಪ ಮಾಡಿದ್ದಾರೆ. ಇಲ್ಲಿ ವರ್ತುಲ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದ ಅವರು ಚಂಡಮಾರುತ, ಭೂಕಂಪ, ಕ್ಷಾಮ, ಪ್ರವಾಹವೇ ಮೊದಲಾದ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ತೀರಾ ಅನಿವಾರ್ಯವಾದಾಗ ರೈಲು ದರ ಏರಿಸಬೇಕಾಗುತ್ತದೆ ಎಂದೂ ಅಟಲ್ ಬಿಹಾರಿ ವಾಜಪೇಯಿ ತಿಳಿಸಿದರು.
ಸಚಿವ ಸಂಪುಟ ಸಭೆ: (ದೆಹಲಿ ವರದಿ) ಹಿಂದೆಂದೂ ಸಂಭವಿಸದಂತ ಭೀಕರ ಭೂಕಂಪದ ಬಗ್ಗೆ ಹಾಗೂ ಪರಿಹಾರ ಕಾಮಗಾರಿಗಳ ಬಗ್ಗೆ ಚರ್ಚಿಸಲು ಗುರುವಾರ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟದ ಸಭೆ ನಡೆಯಲಿದೆ. ಪ್ರಧಾನಿ ವಾಜಪೇಯಿ ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಗುಜರಾತ್ನಲ್ಲಿ ಸಂಪೂರ್ಣ ನಾಶವಾಗಿರುವ ಪಟ್ಟಣಗಳಾದ ಭುಜ್, ಕಛ್, ಗಾಂಧಿಧಾಮ್ ಸೇರಿದಂತೆ ಇನ್ನಿತರ ಭೂಕಂಪ ಪೀಡಿತ ಪ್ರದೇಶಗಳಲ್ಲಿ ನಡೆಯುತ್ತಿರುವ ರಕ್ಷಣಾ ಹಾಗೂ ಪರಿಹಾರ ಕಾಮಗಾರಿ, ಕೈಗೊಳ್ಳಬೇಕಾದ ಪುನರ್ವತಿ ಕಾರ್ಯಕ್ರಮಗಳ ಬಗ್ಗೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು.
ಮುಂದಿನ ದಿನಗಳಲ್ಲಿ ಭೂಕಂಪದ ಹಾನಿಯನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಹ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಈಗ ಚೆನ್ನೈನಲ್ಲಿರುವ ಪ್ರಧಾನಿ ದೆಹಲಿಗೆ ವಾಪಸಾಗುತ್ತಿದ್ದಂತೆಯೇ ಸಭೆ ಆರಂಭವಾಗಲಿದೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್












Click it and Unblock the Notifications