ವೀರಪ್ಪನ್ ವಿರುದ್ಧದ ಕಾರ್ಯಾಚರಣೆ : ಎಸ್.ಎಂ. ಕೃಷ್ಣ ಅಭಿನಂದನೆ
ಬೆಂಗಳೂರು : ಕಾಡುಗಳ್ಳ ವೀರಪ್ಪನ್ ತಂಡದೊಂದಿಗೆ ಶುಕ್ರವಾರ ನಡೆದ ಗುಂಡಿನ ಕಾಳಗದ ಬಳಿಕ ತಮಿಳುನಾಡು ಹಾಗೂ ಕರ್ನಾಟಕ ವಿಶೇಷ ಕಾರ್ಯಪಡೆಯ ಜಂಟಿ ಕಾರ್ಯಾಚರಣೆ ಹುರುಪಿನಿಂದ ಮುಂದುವರಿದಿದೆ. ವೀರಪ್ಪನ್ ತಂಡದ ಒಬ್ಬನನ್ನು ಕೊಂದ ಕಾರ್ಯಪಡೆ ಪೊಲೀಸರು ಈಗ ವೀರಪ್ಪನ್ನನ್ನು ಹಿಡಿಯಲು ಸಂಪೂರ್ಣ ಸಜ್ಜಾಗಿದ್ದಾರೆ.
ಶುಕ್ರವಾರ ಕಾರ್ಯಾಚರಣೆ ನಡೆದ ಪ್ರದೇಶದಲ್ಲಿಯೇ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ರಾಜ್ಯದ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ತಮಿಳುನಾಡು ಗಡಿಗೆ 3 ಕಿ.ಮೀಟರ್ ದೂರದಲ್ಲಿರುವ ಈ ಪ್ರದೇಶದಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ರಾಜ್ಯದ ಪೊಲೀಸ್ ಅಧಿಕಾರಿ ಹರ್ಷವರ್ಧನ ರಾಜು ಅಲ್ಲಿಗೆ ಧಾವಿಸಿದ್ದಾರೆ. ವೀರಪ್ಪನ್ ಶಿಕಾರಿಗೆ ರಾಜ್ಯ ಸರಕಾರ ಎಸ್.ಟಿ.ಎಫ್ಗೆ ಎಲ್ಲ ರೀತಿಯ ನೆರವೂ ನೀಡಲಿದೆ ಎಂದೂ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಭಿನಂದನೆ : ಎಸ್.ಟಿ.ಎಫ್. ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವೂ ನೀಡಲಾಗುವುದು ಎಂದು ಘೋಷಿಸಿರುವ ಮುಖ್ಯಮಂತ್ರಿ ಕೃಷ್ಣ ಅವರು, ಶುಕ್ರವಾರದ ಪೊಲೀಸ ಕಾರ್ಯಾಚರಣೆಯ ಯಶಸ್ಸಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕಾರ್ಯಾಚರಣೆ ನಮ್ಮ ಪೊಲೀಸ್ ಅಧಿಕಾರಿಗಳು ಸೂಕ್ತ ಮಾರ್ಗದಲ್ಲೇ ಸಾಗುತ್ತಿದ್ದಾರೆ ಎಂಬುದರ ದ್ಯೋತಕವಾಗಿದೆ. ಕಾರ್ಯಾಚರಣೆ ಮುಂದುವರಿಯುತ್ತದೆ ಹಾಗೂ ಪೊಲೀಸರು ಯಶಸ್ಸು ಪಡೆದೇ ತೀರುತ್ತಾರೆ ಎಂದಿರುವ ಎಸ್.ಎಂ. ಕೃಷ್ಣ. ಎಸ್.ಟಿ.ಎಫ್. ಪೊಲೀಸರಿಗೆ ತಾವು ಶಹಬಾಷ್ಗಿರಿ ನೀಡುವುದಾಗಿಯೂ ಹೇಳಿದರು.
ಪರಿಸ್ಥಿತಿ ಅನುಕೂಲಕರವಾಗಿದೆ : ವೀರಪ್ಪನ್ ಪೊಲೀಸ್ ಕಾರ್ಯಾಚರಣೆಗೆ ಹೆದರಿ, ತನಗೆ ಅಷ್ಟು ಅನುಕೂಲಕರವಲ್ಲದ ಹಾಗೂ ಹೊಸ ಜಾಗ (ಕಾಡಿನಲ್ಲಿ ) ದಲ್ಲಿ ಆಶ್ರಯ ಪಡೆದಿರುವುದರಿಂದ ಪೊಲೀಸ್ ಕಾರ್ಯಾಚರಣೆಗೆ ಅನುಕೂಲಕರ ಪರಿಸ್ಥಿತಿ ಇದೆ ಎಂದು ಪೊಲೀಸ್ ಮಹಾನಿರ್ದೇಶಕ ಸಿ. ದಿನಕರ್ ತಿಳಿಸಿದ್ದಾರೆ.
(ಯು.ಎನ್.ಐ., ಇಂಡಿಯಾಇನ್ಫೋ ವರದಿ)
ವಾರ್ತಾಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications