ಚಿ.ಮೂ, ಜಿಎಸ್ಸೆಸ್ಗೆ ಬಹಿಷ್ಕಾರ ಹಾಕಿಲ್ಲ : ವೀರಶೈವ ಮಹಾಸಭಾ
ಬೆಂಗಳೂರು : ಹಿರಿಯ ಸಂಶೋಧಕ ಹಾಗೂ ಸಾಹಿತಿ ಡಾ. ಎಂ. ಚಿದಾನಂದಮೂರ್ತಿ ಹಾಗೂ ಡಾ. ಜಿ.ಎಸ್. ಶಿವರುದ್ರಪ್ಪ ಅವರನ್ನು ವೀರಶೈವ ಸಮಾಜದಿಂದ ಬಹಿಷ್ಕರಿಸಲಾಗಿಲ್ಲ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಭೀಮಣ್ಣ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಇದು ಹೈಟೆಕ್ ಯುಗ ಈ ಕಾಲದಲ್ಲೂ ಬಹಿಷ್ಕಾರ ಹಾಕಲು ಸಾಧ್ಯವೇ? ಎಂದು ಪ್ರಶ್ನಿಸಿರುವ ಅವರು, ಇಂತಹ ಹೀನ ಕೃತ್ಯಕ್ಕೆ ಮಹಾಸಭಾ ಕೈಹಾಕುವುದಿಲ್ಲ ಎಂದೂ ತಿಳಿಸಿದ್ದಾರೆ. ಮಿಗಿಲಾಗಿ ಈ ಇಬ್ಬರು ಸಾಹಿತಿಗಳನ್ನು ಸಮಾಜದಿಂದ ಬಹಿಷ್ಕರಿಸುವ ಅಧಿಕಾರವಾದರೂ ನಮಗೆಲ್ಲಿದೆ. ಇದು ಅರ್ಥಹೀನ ಹೇಳಿಕೆ ಎಂದು ಖಂಡ್ರೆ ತಿಳಿಸಿದ್ದಾರೆ.
ಪ್ರಾಚೀನ ವಚನಕಾರ್ತಿ ಅಕ್ಕ ನಾಗಮ್ಮನವರ ಸುಸ್ಥಾಪಿತ ನಂಬಿಕೆಗಳೇ ಸುಳ್ಳು ಎಂದು ಪ್ರತಿಪಾದಿಸಿದ ಪಿ.ವಿ. ನಾರಾಯಣ್ ಅವರ ಧರ್ಮಕಾರಣ ಕೃತಿಗೆ ಸಂಬಂಧಿಸಿದಂತೆ ಬೆಂಬಲಕ್ಕೆ ನಿಂತ ಚಿದಾನಂದ ಮೂರ್ತಿ ಹಾಗೂ ಜಿ.ಎಸ್. ಶಿವರುದ್ರಪ್ಪ ಅವರನ್ನು ಮಹಾಸಭಾದ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ತಡೆಯಲಾಗಿದೆಯೇ ಹೊರತು ಸಮಾಜದಿಂದ ಬಹಿಷ್ಕಾರ ಹಾಕಿಲ್ಲ ಎಂದು ಅವರು ಸ್ಪಷ್ಟೀಕರಣ ನೀಡಿದರು.
2001ರ ಜನಗಣತಿಯಲ್ಲಿ ಧರ್ಮದ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದೇ ಬರೆಸುವಂತೆ ಅವರು ತಮ್ಮ ಕುಲಬಾಂಧವರಿಗೆ ಮನವಿ ಮಾಡಿದರು. ವೀರಶೈವರು ಅಥವಾ ಲಿಂಗಾಯತರೂ ಹಿಂದೂಗಳೇ ಆದರೆ, ಧರ್ಮದ ಕಕ್ಷೆಯಲ್ಲಿ ಸಿಕ್, ಬೌದ್ಧ ಧರ್ಮಗಳಂತೆಯೇ ವೀರಶೈವ ಧರ್ಮ ಕೂಡ ಸರ್ವ ಸ್ವತಂತ್ರ ಧರ್ಮ ಎಂದೂ ಅವರು ಪ್ರತಿಪಾದಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications