ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಳೆಯ ನಂತರ ಮುಂದುವರಿದ ಒಣಹವೆ
ಬೆಂಗಳೂರು : ಮೊನ್ನೆಯ ಕರಾವಳಿಯ ಅನಿರೀಕ್ಷಿತ ಮಳೆಯ ನಂತರ ಮತ್ತೆ ಒಣಹವೆ ರಾಜ್ಯದೆಲ್ಲೆಡೆ ಮುಂದುವರಿದಿದೆ. ರಾಜ್ಯಾದ್ಯಂತ ಕನಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಕನಿಷ್ಠ ತಾಪಮಾನ ಸಾಮಾನ್ಯ ಮಟ್ಟಕ್ಕಿಂತಲೂ ಅಧಿಕವಾಗಿದೆ.
ರಾಜ್ಯದ ಅತಿ ಕನಿಷ್ಠ ತಾಪಮಾನ ಬಾಗಲಕೋಟೆಯಲ್ಲಿ ದಾಖಲಾಗಿದೆ. ಹವಾಮಾನ ವೀಕ್ಷಣಾಲಯದ ವರದಿಗಳ ರೀತ್ಯ ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಣಹವೆ ಮುಂದವರಿಯಲಿದೆ. ಸ್ಥಳೀಯ ಹವಾಮಾನ ಮುನ್ಸೂಚನೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡವಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರುತ್ತದೆ ಎಂದು ತಿಳಿಸಿದೆ.
Comments
Story first published: Saturday, February 3, 2001, 5:30 [IST]